ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ ನಡೆಸಿದ ಅವರು, ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನ ಅನ್ವಯಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವ ದಿನೇಶ್ ಗುಂಡೂರಾವ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ನಂತರ ಅವರು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭ ಅವರು ರಾಜ್ಯ ಸರಕಾರದ ವತಿಯಿಂದ ತಲಾ ಐದು ಲಕ್ಷ ಪರಿಹಾರ ನೆರವು ವಿತರಿಸಿದರು.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…