ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದೂ ಆಯ್ಕೆ ನಡೆಯಲಿಲ್ಲ, ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಸೇರಿಸಿ ಸಭೆ ನಡೆಸಲು ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.
ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಭೆ ನಡೆದವು. ಆದರೆ ಸಿಎಂ ಆಯ್ಕೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಪೂರ್ಣಾವಧಿಗೇ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ, ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ, ಹಾಗೊಂದು ವೇಳೆ ನೀವೇ ಸಿಎಂ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಹೀಗಾಗಿ ಎಲ್ಲಾ ಸಭೆಗಳೂ ಮಂಗಳವಾರವೂ ವಿಫಲವಾದವು. ಇದಕ್ಕಾಗಿ ಬುಧವಾರ ಮತ್ತೆ ಸಭೆ ನಡೆಯಲಿದೆ.
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490