ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದೂ ಆಯ್ಕೆ ನಡೆಯಲಿಲ್ಲ, ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಸೇರಿಸಿ ಸಭೆ ನಡೆಸಲು ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.
ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಭೆ ನಡೆದವು. ಆದರೆ ಸಿಎಂ ಆಯ್ಕೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಪೂರ್ಣಾವಧಿಗೇ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ, ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ, ಹಾಗೊಂದು ವೇಳೆ ನೀವೇ ಸಿಎಂ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಹೀಗಾಗಿ ಎಲ್ಲಾ ಸಭೆಗಳೂ ಮಂಗಳವಾರವೂ ವಿಫಲವಾದವು. ಇದಕ್ಕಾಗಿ ಬುಧವಾರ ಮತ್ತೆ ಸಭೆ ನಡೆಯಲಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…