ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಕ್ಷೇತ್ರದ ಪ್ರಗತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು. ಮುಂಗಾರು ಬೆಳೆಗಳ ಪರಿಸ್ಥಿತಿ, ಹಿಂಗಾರು ಬಿತ್ತನೆ ಸಿದ್ಧತೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಬೆಳೆ ಪರಿಸ್ಥಿತಿ, ಬೆಲೆ ಪ್ರವೃತ್ತಿಗಳು, ರಸಗೊಬ್ಬರ ಲಭ್ಯತೆ ಮತ್ತು ಜಲಾಶಯಗಳ ಸಂಗ್ರಹಣಾ ಮಟ್ಟಗಳನ್ನು, ಸಭೆಯು ಸಮಗ್ರವಾಗಿ ಮೌಲ್ಯಮಾಪನ ಮಾಡಿತು.
ಸಭೆಯಲ್ಲಿ ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಕಳೆದ ವರ್ಷಕ್ಕೆ ಹೋಲಿಸಿದರೆ, ಮುಂಗಾರು ಬೆಳೆಗಳ ಒಟ್ಟು ವಿಸ್ತೀರ್ಣ 6.51 ಲಕ್ಷ ಹೆಕ್ಟೇರ್ ಗಳಷ್ಟು ಹೆಚ್ಚಾಗಿದೆ. ನೀರಿನ ಲಭ್ಯತೆಗೆ ಸಂಬಂಧಿಸಿದಂತೆ, ದೇಶಾದ್ಯಂತ ಜಲಾಶಯಗಳ ಸಂಗ್ರಹಣಾ ಮಟ್ಟ, ಕಳೆದ ವರ್ಷದ ಇದೇ ಅವಧಿಗೆ ಮತ್ತು ಕಳೆದ ದಶಕದ ಸರಾಸರಿಗೆ ಹೋಲಿಸಿದರೆ, ಗಮನಾರ್ಹವಾಗಿ ಉತ್ತಮವಾಗಿದೆ. ರಸಗೊಬ್ಬರಗಳ ಲಭ್ಯತೆಯನ್ನು ಪರಿಶೀಲಿಸಿದ ಸಚಿವರು, ಮುಂಬರುವ ದಿನಗಳಲ್ಲಿ ಸುಗಮ ಮತ್ತು ಸಕಾಲಿಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಅಡೆತಡೆಗಳನ್ನು ನಿವಾರಿಸಲು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದೊಂದಿಗೆ ನಿಕಟ ಸಮನ್ವಯವನ್ನು ಕಾಯ್ದುಕೊಳ್ಳಬೇಕೆಂದು, ಅವರು ಸೂಚನೆ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…