ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾ ಮಾಡುತ್ತಿದ್ದ ಅಡಿಕೆಯನ್ನು ಗಡಿ ಭದ್ರತಾ ಪಡೆ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುಮಾರು 24 ಲಕ್ಷ ರೂಪಾಯಿ ಮೌಲ್ಯದ 11000 ಕೆಜಿ ಒಣ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇಘಾಲಯದ ರೋಂಗಾರಾ ಪ್ರದೇಶದಲ್ಲಿ ಅಡಿಕೆ ಸಾಗಾಟ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಮೂರು ಲಾರಿಗಳಲ್ಲಿ ಒಟ್ಟು 24 ಲಕ್ಷ ರೂ.ಮೌಲ್ಯದ ಒಣ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಬಿಎಸ್ಎಫ್ ಪ್ರಕಾರ, ವಾಹನಗಳ ಎಲ್ಲಾ ಮೂವರು ಚಾಲಕರು ತಪ್ಪಿಸಿಕೊಂಡಿದ್ದಾರೆ. ತನಿಖೆ ಮುಂದುವರಿಯುತ್ತಿದೆ.
ಕಳೆದ ಕೆಲವು ಸಮಯಗಳಿಂದ ಅಡಿಕೆಯು ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುತ್ತಲೇ ಇದೆ. ಸಣ್ಣ ಪ್ರಮಾಣದಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಈಚೆಗೆ ದೊಡ್ಡ ಪ್ರಮಾಣದಲ್ಲಿಯೂ ಸಾಗಾಟವಾಗುತ್ತಿರುವುದು ಬೆಳಕಿಗೆ ಬಂದಿದೆ. ಮುಂದೆಯೂ ಕಾರ್ಯಾಚರಣೆಗಳು ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…