ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾ ಮಾಡುತ್ತಿದ್ದ ಅಡಿಕೆಯನ್ನು ಗಡಿ ಭದ್ರತಾ ಪಡೆ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಸುಮಾರು 24 ಲಕ್ಷ ರೂಪಾಯಿ ಮೌಲ್ಯದ 11000 ಕೆಜಿ ಒಣ ಅಡಿಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೇಘಾಲಯದ ರೋಂಗಾರಾ ಪ್ರದೇಶದಲ್ಲಿ ಅಡಿಕೆ ಸಾಗಾಟ ಪತ್ತೆಯಾಗಿದೆ. ಕಾರ್ಯಾಚರಣೆ ವೇಳೆ ಮೂರು ಲಾರಿಗಳಲ್ಲಿ ಒಟ್ಟು 24 ಲಕ್ಷ ರೂ.ಮೌಲ್ಯದ ಒಣ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಬಿಎಸ್ಎಫ್ ಪ್ರಕಾರ, ವಾಹನಗಳ ಎಲ್ಲಾ ಮೂವರು ಚಾಲಕರು ತಪ್ಪಿಸಿಕೊಂಡಿದ್ದಾರೆ. ತನಿಖೆ ಮುಂದುವರಿಯುತ್ತಿದೆ.
ಕಳೆದ ಕೆಲವು ಸಮಯಗಳಿಂದ ಅಡಿಕೆಯು ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುತ್ತಲೇ ಇದೆ. ಸಣ್ಣ ಪ್ರಮಾಣದಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಈಚೆಗೆ ದೊಡ್ಡ ಪ್ರಮಾಣದಲ್ಲಿಯೂ ಸಾಗಾಟವಾಗುತ್ತಿರುವುದು ಬೆಳಕಿಗೆ ಬಂದಿದೆ. ಮುಂದೆಯೂ ಕಾರ್ಯಾಚರಣೆಗಳು ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…