ಜ.20 ರಿಂದ 22 | ಹುಬ್ಬಳ್ಳಿಯಲ್ಲಿ ಒಣ ಮೆಣಸಿನಕಾಯಿ ಮೇಳ

January 11, 2023
10:34 PM

ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃಧ್ಧಿ ಮಂಡಳಿ, ಹುಬ್ಬಳ್ಳಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಹುಬ್ಬಳ್ಳಿ, ತೋಟಗಾರಿಕೆ ಇಲಾಖೆ ಧಾರವಾಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಮತ್ತು ಉಳವಾಯೋಗಿ ರೈತ ಉತ್ಪಾದಕ ಸಂಸ್ಥೆ ಅಮರಗೋಳ ಇವುಗಳ ಸಂಯುಕ್ತಾಶ್ರಯದಲ್ಲಿ 11 ನೇ ಒಣಮೆಣಸಿನಕಾಯಿ ಮೇಳವನ್ನು ಜ 20ರಿಂದ 22ರವರೆಗೆ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.‌

ಆಸಕ್ತ ರೈತರು ಮುಂಚಿತವಾಗಿ ನೋಂದಣಿಯನ್ನು ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ, ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯಲ್ಲಿ ಪಹಣಿ ಪತ್ರಿಕೆ ಮತ್ತು ಆಧಾರ ಕಾರ್ಡನೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0836 2375030, ತೋಟಗಾರಿಕೆ ಇಲಾಖೆ ಹುಬ್ಬಳ್ಳಿ ದೂರವಾಣಿ ಸಂಖ್ಯೆ 0836 2355138, ತೋಟಗಾರಿಕೆ ಇಲಾಖೆ ಧಾರವಾಡ ದೂರವಾಣಿ ಸಂಖ್ಯೆ 0836 2746334, ತೋಟಗಾರಿಕೆ ಇಲಾಖೆ ನವಲಗುಂದ 08380 229170, ಅಮರಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ದೂರವಾಣಿ ಸಂಖ್ಯೆ 08304 296297 ಸಂಖ್ಯೆಗಳನ್ನು ಸಂಪರ್ಕಿಸುವಂತೆ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror