Opinion

#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಂಗು #melasma. ಇದನ್ನು ಆಯುರ್ವೇದದಲ್ಲಿ ವ್ಯಂಗ #Vyanga ಎಂದು ಕರೆಯಲಾಗುತ್ತದೆ. ಇದು ಸಾಧಾರಣ ಮಧ್ಯವಯಸ್ಕರಲ್ಲಿ ಮುಖದ ಮೇಲೆ, ಹಣೆ,ಗಲ್ಲ, ಕುತ್ತಿಗೆ ಬೆನ್ನು ಭಾಗದಲ್ಲಿ ಕಾಣಿಸಿಕೊಳ್ಳುವ ಒಂದು ತರದ ಕಪ್ಪು ಕಲೆಯುಳ್ಳ ಚರ್ಮವ್ಯಾಧಿ. ಇದರಲ್ಲಿ ಚರ್ಮ ಕಂದು ಅಥವಾ ಕೆಂಪು ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದನ್ನು ಸಾಮಾನ್ಯವಾಗಿ ಬಂಗು ಅಥವಾ ಕರಂಗ ಅಥವಾ ಮೆಲಾಸ್ಮಾ ಎಂದು ಕರೆಯುತ್ತಾರೆ. ಸ್ತ್ರೀಯರಲ್ಲಿ ಅಧಿಕವಾಗಿ ಕಾಣಬಹುದು. ಚರ್ಮದ ಕೋಶಗಳಲ್ಲಿ ಮೆಲನಿನ್ ಎಂಬ ವರ್ಣಕಾರಕ ಇದೆ. ಇದರಿಂದ ಚರ್ಮಕ್ಕೆ ಬಣ್ಣ ಬರುತ್ತದೆ. ಮೆಲನಿನ್ ಅಧಿಕ ಉತ್ಪಾದನೆ ಆಗುವುದರಿಂದ ಹೈಪರ್ ಪಿಗ್ಮೆಂಟೇಷನ್ ಉಂಟಾಗುತ್ತದೆ.

Advertisement

ಇದಕ್ಕೆ ಕಾರಣಗಳೇನು..?:
– ಸುಡುವ ಬಿಸಿಲಿಗೆ ಸತತವಾಗಿ ಚರ್ಮವನ್ನು ಒಡ್ಡುವುದು
– ಹಾರ್ಮೋನ್ ನ ಬದಲಾವಣೆಗಳು (ಹೆರಿಗೆಯ ನಂತರ ಮಹಿಳೆಯರಲ್ಲಿ ಹಾರ್ಮೋನ್ ಬದಲಾವಣೆಯಿಂದ ಸಾಮಾನ್ಯವಾಗಿ ಕಂಡುಬರುತ್ತದೆ )
– ಅನುವಂಶಿಯತೆ
– ಆಹಾರದಲ್ಲಿ ಪೋಷಕಾಂಶಗಳ ಕೊರತೆ . ವಿಟಮಿನ್ E ಮತ್ತು C ಕೊರತೆಯಿಂದಲೂ ಹೈಪರ್ ಪಿಗ್ಮೆಂಟೇಷನ್ ಉಂಟಾಗಬಹುದು.

ಪರಿಹಾರ:
–  ಬಿಸಿಲಿಗೆ ಹೆಚ್ಚು ಹೋಗದೇ ಇರುವುದು
– ವಿಟಮಿನ್ ಸಿ ಜಾಸ್ತಿ ಇರುವ ಕಿತ್ತಳೆ ಹಣ್ಣಿನ ಸೇವನೆ ಹಾಗೂ ವಿಟಮಿನ್ E ಹೇರಳವಾಗಿರುವ ಹಸಿರು ತರಕಾರಿಗಳು, ಗೋಧಿ ರಾಗಿಯ ಅತಿ ಹೆಚ್ಚು ಬಳಕೆ ಮಾಡವುದು
– ಚರ್ಮದ ಕಾಂತಿಯನ್ನು ಹೆಚ್ಚಿಸುವ ಲೋಳೆಸರ, ಅರಸಿನ ಇವುಗಳ ಲೇಪನ
– ನೈಸರ್ಗಿಕವಾಗಿ ರಕ್ತ ಶುದ್ಧ ಮಾಡಲು ಸರಿಯಾದ ಪ್ರಮಾಣದಲ್ಲಿ ನೀರಿನ ಸೇವನೆ.
– ರಾಸಾಯನಿಕ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವಂಥದ್ದು
– ಪ್ರತಿದಿನ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು.
– ಉತ್ತಮ ಚರ್ಮದ ರಕ್ಷಣೆಗಾಗಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.

ಬರಹ :
ಡಾ. ಜ್ಯೋತಿ ಕೆ, ಆಯುರ್ವೇದ ತಜ್ಞರು, ಮಂಗಳೂರು, 94481 68053
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

42 minutes ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

4 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

4 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

12 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

14 hours ago