Advertisement
Opinion

#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |

Share

ಬಂಗು #melasma. ಇದನ್ನು ಆಯುರ್ವೇದದಲ್ಲಿ ವ್ಯಂಗ #Vyanga ಎಂದು ಕರೆಯಲಾಗುತ್ತದೆ. ಇದು ಸಾಧಾರಣ ಮಧ್ಯವಯಸ್ಕರಲ್ಲಿ ಮುಖದ ಮೇಲೆ, ಹಣೆ,ಗಲ್ಲ, ಕುತ್ತಿಗೆ ಬೆನ್ನು ಭಾಗದಲ್ಲಿ ಕಾಣಿಸಿಕೊಳ್ಳುವ ಒಂದು ತರದ ಕಪ್ಪು ಕಲೆಯುಳ್ಳ ಚರ್ಮವ್ಯಾಧಿ. ಇದರಲ್ಲಿ ಚರ್ಮ ಕಂದು ಅಥವಾ ಕೆಂಪು ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದನ್ನು ಸಾಮಾನ್ಯವಾಗಿ ಬಂಗು ಅಥವಾ ಕರಂಗ ಅಥವಾ ಮೆಲಾಸ್ಮಾ ಎಂದು ಕರೆಯುತ್ತಾರೆ. ಸ್ತ್ರೀಯರಲ್ಲಿ ಅಧಿಕವಾಗಿ ಕಾಣಬಹುದು. ಚರ್ಮದ ಕೋಶಗಳಲ್ಲಿ ಮೆಲನಿನ್ ಎಂಬ ವರ್ಣಕಾರಕ ಇದೆ. ಇದರಿಂದ ಚರ್ಮಕ್ಕೆ ಬಣ್ಣ ಬರುತ್ತದೆ. ಮೆಲನಿನ್ ಅಧಿಕ ಉತ್ಪಾದನೆ ಆಗುವುದರಿಂದ ಹೈಪರ್ ಪಿಗ್ಮೆಂಟೇಷನ್ ಉಂಟಾಗುತ್ತದೆ.

ಇದಕ್ಕೆ ಕಾರಣಗಳೇನು..?:
– ಸುಡುವ ಬಿಸಿಲಿಗೆ ಸತತವಾಗಿ ಚರ್ಮವನ್ನು ಒಡ್ಡುವುದು
– ಹಾರ್ಮೋನ್ ನ ಬದಲಾವಣೆಗಳು (ಹೆರಿಗೆಯ ನಂತರ ಮಹಿಳೆಯರಲ್ಲಿ ಹಾರ್ಮೋನ್ ಬದಲಾವಣೆಯಿಂದ ಸಾಮಾನ್ಯವಾಗಿ ಕಂಡುಬರುತ್ತದೆ )
– ಅನುವಂಶಿಯತೆ
– ಆಹಾರದಲ್ಲಿ ಪೋಷಕಾಂಶಗಳ ಕೊರತೆ . ವಿಟಮಿನ್ E ಮತ್ತು C ಕೊರತೆಯಿಂದಲೂ ಹೈಪರ್ ಪಿಗ್ಮೆಂಟೇಷನ್ ಉಂಟಾಗಬಹುದು.

ಪರಿಹಾರ:
–  ಬಿಸಿಲಿಗೆ ಹೆಚ್ಚು ಹೋಗದೇ ಇರುವುದು
– ವಿಟಮಿನ್ ಸಿ ಜಾಸ್ತಿ ಇರುವ ಕಿತ್ತಳೆ ಹಣ್ಣಿನ ಸೇವನೆ ಹಾಗೂ ವಿಟಮಿನ್ E ಹೇರಳವಾಗಿರುವ ಹಸಿರು ತರಕಾರಿಗಳು, ಗೋಧಿ ರಾಗಿಯ ಅತಿ ಹೆಚ್ಚು ಬಳಕೆ ಮಾಡವುದು
– ಚರ್ಮದ ಕಾಂತಿಯನ್ನು ಹೆಚ್ಚಿಸುವ ಲೋಳೆಸರ, ಅರಸಿನ ಇವುಗಳ ಲೇಪನ
– ನೈಸರ್ಗಿಕವಾಗಿ ರಕ್ತ ಶುದ್ಧ ಮಾಡಲು ಸರಿಯಾದ ಪ್ರಮಾಣದಲ್ಲಿ ನೀರಿನ ಸೇವನೆ.
– ರಾಸಾಯನಿಕ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವಂಥದ್ದು
– ಪ್ರತಿದಿನ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು.
– ಉತ್ತಮ ಚರ್ಮದ ರಕ್ಷಣೆಗಾಗಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.

ಬರಹ :
ಡಾ. ಜ್ಯೋತಿ ಕೆ, ಆಯುರ್ವೇದ ತಜ್ಞರು, ಮಂಗಳೂರು, 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

3 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

4 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

17 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

17 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

18 hours ago