Advertisement
Opinion

#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |

Share

ಬಂಗು #melasma. ಇದನ್ನು ಆಯುರ್ವೇದದಲ್ಲಿ ವ್ಯಂಗ #Vyanga ಎಂದು ಕರೆಯಲಾಗುತ್ತದೆ. ಇದು ಸಾಧಾರಣ ಮಧ್ಯವಯಸ್ಕರಲ್ಲಿ ಮುಖದ ಮೇಲೆ, ಹಣೆ,ಗಲ್ಲ, ಕುತ್ತಿಗೆ ಬೆನ್ನು ಭಾಗದಲ್ಲಿ ಕಾಣಿಸಿಕೊಳ್ಳುವ ಒಂದು ತರದ ಕಪ್ಪು ಕಲೆಯುಳ್ಳ ಚರ್ಮವ್ಯಾಧಿ. ಇದರಲ್ಲಿ ಚರ್ಮ ಕಂದು ಅಥವಾ ಕೆಂಪು ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದನ್ನು ಸಾಮಾನ್ಯವಾಗಿ ಬಂಗು ಅಥವಾ ಕರಂಗ ಅಥವಾ ಮೆಲಾಸ್ಮಾ ಎಂದು ಕರೆಯುತ್ತಾರೆ. ಸ್ತ್ರೀಯರಲ್ಲಿ ಅಧಿಕವಾಗಿ ಕಾಣಬಹುದು. ಚರ್ಮದ ಕೋಶಗಳಲ್ಲಿ ಮೆಲನಿನ್ ಎಂಬ ವರ್ಣಕಾರಕ ಇದೆ. ಇದರಿಂದ ಚರ್ಮಕ್ಕೆ ಬಣ್ಣ ಬರುತ್ತದೆ. ಮೆಲನಿನ್ ಅಧಿಕ ಉತ್ಪಾದನೆ ಆಗುವುದರಿಂದ ಹೈಪರ್ ಪಿಗ್ಮೆಂಟೇಷನ್ ಉಂಟಾಗುತ್ತದೆ.

ಇದಕ್ಕೆ ಕಾರಣಗಳೇನು..?:
– ಸುಡುವ ಬಿಸಿಲಿಗೆ ಸತತವಾಗಿ ಚರ್ಮವನ್ನು ಒಡ್ಡುವುದು
– ಹಾರ್ಮೋನ್ ನ ಬದಲಾವಣೆಗಳು (ಹೆರಿಗೆಯ ನಂತರ ಮಹಿಳೆಯರಲ್ಲಿ ಹಾರ್ಮೋನ್ ಬದಲಾವಣೆಯಿಂದ ಸಾಮಾನ್ಯವಾಗಿ ಕಂಡುಬರುತ್ತದೆ )
– ಅನುವಂಶಿಯತೆ
– ಆಹಾರದಲ್ಲಿ ಪೋಷಕಾಂಶಗಳ ಕೊರತೆ . ವಿಟಮಿನ್ E ಮತ್ತು C ಕೊರತೆಯಿಂದಲೂ ಹೈಪರ್ ಪಿಗ್ಮೆಂಟೇಷನ್ ಉಂಟಾಗಬಹುದು.

ಪರಿಹಾರ:
–  ಬಿಸಿಲಿಗೆ ಹೆಚ್ಚು ಹೋಗದೇ ಇರುವುದು
– ವಿಟಮಿನ್ ಸಿ ಜಾಸ್ತಿ ಇರುವ ಕಿತ್ತಳೆ ಹಣ್ಣಿನ ಸೇವನೆ ಹಾಗೂ ವಿಟಮಿನ್ E ಹೇರಳವಾಗಿರುವ ಹಸಿರು ತರಕಾರಿಗಳು, ಗೋಧಿ ರಾಗಿಯ ಅತಿ ಹೆಚ್ಚು ಬಳಕೆ ಮಾಡವುದು
– ಚರ್ಮದ ಕಾಂತಿಯನ್ನು ಹೆಚ್ಚಿಸುವ ಲೋಳೆಸರ, ಅರಸಿನ ಇವುಗಳ ಲೇಪನ
– ನೈಸರ್ಗಿಕವಾಗಿ ರಕ್ತ ಶುದ್ಧ ಮಾಡಲು ಸರಿಯಾದ ಪ್ರಮಾಣದಲ್ಲಿ ನೀರಿನ ಸೇವನೆ.
– ರಾಸಾಯನಿಕ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವಂಥದ್ದು
– ಪ್ರತಿದಿನ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು.
– ಉತ್ತಮ ಚರ್ಮದ ರಕ್ಷಣೆಗಾಗಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.

ಬರಹ :
ಡಾ. ಜ್ಯೋತಿ ಕೆ, ಆಯುರ್ವೇದ ತಜ್ಞರು, ಮಂಗಳೂರು, 94481 68053
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

8 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

21 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

21 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago