Advertisement
Opinion

#Melasma | ಚೆಲುವಿಗೆ ಕುಂದು ತಂದಿದೆಯೇ ಬಂಗು | ಇದಕ್ಕೆ ಆಯುರ್ವೇದದಲ್ಲಿದೆ ಪರಿಹಾರ |

Share

ಬಂಗು #melasma. ಇದನ್ನು ಆಯುರ್ವೇದದಲ್ಲಿ ವ್ಯಂಗ #Vyanga ಎಂದು ಕರೆಯಲಾಗುತ್ತದೆ. ಇದು ಸಾಧಾರಣ ಮಧ್ಯವಯಸ್ಕರಲ್ಲಿ ಮುಖದ ಮೇಲೆ, ಹಣೆ,ಗಲ್ಲ, ಕುತ್ತಿಗೆ ಬೆನ್ನು ಭಾಗದಲ್ಲಿ ಕಾಣಿಸಿಕೊಳ್ಳುವ ಒಂದು ತರದ ಕಪ್ಪು ಕಲೆಯುಳ್ಳ ಚರ್ಮವ್ಯಾಧಿ. ಇದರಲ್ಲಿ ಚರ್ಮ ಕಂದು ಅಥವಾ ಕೆಂಪು ಅಥವಾ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದನ್ನು ಸಾಮಾನ್ಯವಾಗಿ ಬಂಗು ಅಥವಾ ಕರಂಗ ಅಥವಾ ಮೆಲಾಸ್ಮಾ ಎಂದು ಕರೆಯುತ್ತಾರೆ. ಸ್ತ್ರೀಯರಲ್ಲಿ ಅಧಿಕವಾಗಿ ಕಾಣಬಹುದು. ಚರ್ಮದ ಕೋಶಗಳಲ್ಲಿ ಮೆಲನಿನ್ ಎಂಬ ವರ್ಣಕಾರಕ ಇದೆ. ಇದರಿಂದ ಚರ್ಮಕ್ಕೆ ಬಣ್ಣ ಬರುತ್ತದೆ. ಮೆಲನಿನ್ ಅಧಿಕ ಉತ್ಪಾದನೆ ಆಗುವುದರಿಂದ ಹೈಪರ್ ಪಿಗ್ಮೆಂಟೇಷನ್ ಉಂಟಾಗುತ್ತದೆ.

ಇದಕ್ಕೆ ಕಾರಣಗಳೇನು..?:
– ಸುಡುವ ಬಿಸಿಲಿಗೆ ಸತತವಾಗಿ ಚರ್ಮವನ್ನು ಒಡ್ಡುವುದು
– ಹಾರ್ಮೋನ್ ನ ಬದಲಾವಣೆಗಳು (ಹೆರಿಗೆಯ ನಂತರ ಮಹಿಳೆಯರಲ್ಲಿ ಹಾರ್ಮೋನ್ ಬದಲಾವಣೆಯಿಂದ ಸಾಮಾನ್ಯವಾಗಿ ಕಂಡುಬರುತ್ತದೆ )
– ಅನುವಂಶಿಯತೆ
– ಆಹಾರದಲ್ಲಿ ಪೋಷಕಾಂಶಗಳ ಕೊರತೆ . ವಿಟಮಿನ್ E ಮತ್ತು C ಕೊರತೆಯಿಂದಲೂ ಹೈಪರ್ ಪಿಗ್ಮೆಂಟೇಷನ್ ಉಂಟಾಗಬಹುದು.

ಪರಿಹಾರ:
–  ಬಿಸಿಲಿಗೆ ಹೆಚ್ಚು ಹೋಗದೇ ಇರುವುದು
– ವಿಟಮಿನ್ ಸಿ ಜಾಸ್ತಿ ಇರುವ ಕಿತ್ತಳೆ ಹಣ್ಣಿನ ಸೇವನೆ ಹಾಗೂ ವಿಟಮಿನ್ E ಹೇರಳವಾಗಿರುವ ಹಸಿರು ತರಕಾರಿಗಳು, ಗೋಧಿ ರಾಗಿಯ ಅತಿ ಹೆಚ್ಚು ಬಳಕೆ ಮಾಡವುದು
– ಚರ್ಮದ ಕಾಂತಿಯನ್ನು ಹೆಚ್ಚಿಸುವ ಲೋಳೆಸರ, ಅರಸಿನ ಇವುಗಳ ಲೇಪನ
– ನೈಸರ್ಗಿಕವಾಗಿ ರಕ್ತ ಶುದ್ಧ ಮಾಡಲು ಸರಿಯಾದ ಪ್ರಮಾಣದಲ್ಲಿ ನೀರಿನ ಸೇವನೆ.
– ರಾಸಾಯನಿಕ ವಸ್ತುಗಳ ಬಳಕೆಯನ್ನು ಆದಷ್ಟು ಕಡಿಮೆ ಮಾಡುವಂಥದ್ದು
– ಪ್ರತಿದಿನ ಸೇವಿಸುವ ಆಹಾರದ ಬಗ್ಗೆ ಗಮನ ಹರಿಸಬೇಕು.
– ಉತ್ತಮ ಚರ್ಮದ ರಕ್ಷಣೆಗಾಗಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.

ಬರಹ :
ಡಾ. ಜ್ಯೋತಿ ಕೆ, ಆಯುರ್ವೇದ ತಜ್ಞರು, ಮಂಗಳೂರು, 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

6 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

7 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

14 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

17 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

23 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago