MIRROR FOCUS

ಗುತ್ತಿಗಾರು ಸ್ವಚ್ಛತಾ ಅಭಿಯಾನ | ವಾರ್ಡ್‌ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಸಂಜೀವಿನಿ ಒಕ್ಕೂಟದ ಸದಸ್ಯರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆಯುತ್ತಿರುವ ಸ್ವಚ್ಛ ಗುತ್ತಿಗಾರು ಅಭಿಯಾನವು ಕಳೆದ 11 ವಾರಗಳಿಂದ ನಿರಂತರವಾಗಿ ನಡೆಯುತ್ತಿದೆ. ಸ್ವಚ್ಛತಾ ಟಾಸ್ಕ್‌ ಫೋರ್ಸ್‌ ಹಾಗೂ ಗುತ್ತಿಗಾರು ಗ್ರಾಪಂ , ಸಂಜೀವಿನ ಒಕ್ಕೂಟ, ವರ್ತಕ ಸಂಘ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯ ಪ್ರತೀ ವಾರ ಸ್ವಚ್ಛತಾ ಜಾಗೃತಿ ಅಭಿಯಾನ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದೀಗ ಸಂಜೀವಿನಿ ತಂಡವು ವಾರ್ಡ್‌ ಮಟ್ಟದಲ್ಲಿ ಈ ಕಾರ್ಯವನ್ನು ನಡೆಸುತ್ತಿದೆ.

Advertisement

ಬುಧವಾರ ಸ್ವಚ್ಚತಾ ಕಾರ್ಯವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಮಟ್ಟದ ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ಕಡ್ತಲ್ ಕಜೆ- ವಳಲಂಬೆ- ಕಾಜಿಮಡ್ಕ- ವಳಲಂಬೆ ಅಂಗವಾಡಿ-ಹಾಗೂ ವಳಲಂಬೆಯ ರಸ್ತೆ ಬದಿಗಳಲ್ಲಿ ಸ್ವಚ್ಚತೆ ಮಾಡಲಾಯಿತು. ರಸ್ತೆ ಬದಿಗಳಲ್ಲಿದ್ದ ಕಸವನ್ನು ಗೋಣಿಚೀಲದಲ್ಲಿ ತುಂಬಿಸಿಡಲಾಯಿತು.ಬೆಳಗ್ಗೆ 10ಗಂಟೆಗೆ ಆರಂಭವಾದ ಸ್ವಚ್ಚತಾ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರ ಮೂಕಮಲೆ ಉಪಸ್ಥಿತಿಯಲ್ಲಿ ಮುಂದುವರೆಯಿತು.

ಈ ಸ್ವಚ್ಚತಾ ಕಾರ್ಯದಲ್ಲಿ ಶಂಖಪಾಲ ಸ್ತ್ರೀ ಶಕ್ತಿ, ಶಂಖಶ್ರೀ ಸ್ತ್ರೀ ಶಕ್ತಿ, ಶ್ರೀ ದುರ್ಗಾ ಸ್ತ್ರೀ ಶಕ್ತಿ, ಯಶಸ್ವಿ ಸಂಜೀವಿನಿ, ಬಾಂಧವ್ಯ ಸಂಜೀವಿನಿ,ಚಿಗುರು ಸಂಜೀವಿನಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ,ಆಶಾಕಾರ್ಯಕರ್ತೆ,ಅಮರ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿಗಳು, ಪಶುಸಖಿ,ಕೃಷಿ ಸಖಿ ಹಾಗೂ ವಾರ್ಡ್ ಪದಾಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

2 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

7 hours ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

8 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

19 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

19 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

1 day ago