ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆಯುತ್ತಿರುವ ಸ್ವಚ್ಛ ಗುತ್ತಿಗಾರು ಅಭಿಯಾನವು ಕಳೆದ 11 ವಾರಗಳಿಂದ ನಿರಂತರವಾಗಿ ನಡೆಯುತ್ತಿದೆ. ಸ್ವಚ್ಛತಾ ಟಾಸ್ಕ್ ಫೋರ್ಸ್ ಹಾಗೂ ಗುತ್ತಿಗಾರು ಗ್ರಾಪಂ , ಸಂಜೀವಿನ ಒಕ್ಕೂಟ, ವರ್ತಕ ಸಂಘ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯ ಪ್ರತೀ ವಾರ ಸ್ವಚ್ಛತಾ ಜಾಗೃತಿ ಅಭಿಯಾನ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದೀಗ ಸಂಜೀವಿನಿ ತಂಡವು ವಾರ್ಡ್ ಮಟ್ಟದಲ್ಲಿ ಈ ಕಾರ್ಯವನ್ನು ನಡೆಸುತ್ತಿದೆ.
ಬುಧವಾರ ಸ್ವಚ್ಚತಾ ಕಾರ್ಯವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಮಟ್ಟದ ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ಕಡ್ತಲ್ ಕಜೆ- ವಳಲಂಬೆ- ಕಾಜಿಮಡ್ಕ- ವಳಲಂಬೆ ಅಂಗವಾಡಿ-ಹಾಗೂ ವಳಲಂಬೆಯ ರಸ್ತೆ ಬದಿಗಳಲ್ಲಿ ಸ್ವಚ್ಚತೆ ಮಾಡಲಾಯಿತು. ರಸ್ತೆ ಬದಿಗಳಲ್ಲಿದ್ದ ಕಸವನ್ನು ಗೋಣಿಚೀಲದಲ್ಲಿ ತುಂಬಿಸಿಡಲಾಯಿತು.ಬೆಳಗ್ಗೆ 10ಗಂಟೆಗೆ ಆರಂಭವಾದ ಸ್ವಚ್ಚತಾ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರ ಮೂಕಮಲೆ ಉಪಸ್ಥಿತಿಯಲ್ಲಿ ಮುಂದುವರೆಯಿತು.
ಈ ಸ್ವಚ್ಚತಾ ಕಾರ್ಯದಲ್ಲಿ ಶಂಖಪಾಲ ಸ್ತ್ರೀ ಶಕ್ತಿ, ಶಂಖಶ್ರೀ ಸ್ತ್ರೀ ಶಕ್ತಿ, ಶ್ರೀ ದುರ್ಗಾ ಸ್ತ್ರೀ ಶಕ್ತಿ, ಯಶಸ್ವಿ ಸಂಜೀವಿನಿ, ಬಾಂಧವ್ಯ ಸಂಜೀವಿನಿ,ಚಿಗುರು ಸಂಜೀವಿನಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ,ಆಶಾಕಾರ್ಯಕರ್ತೆ,ಅಮರ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿಗಳು, ಪಶುಸಖಿ,ಕೃಷಿ ಸಖಿ ಹಾಗೂ ವಾರ್ಡ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…