Advertisement
MIRROR FOCUS

ಗುತ್ತಿಗಾರು ಸ್ವಚ್ಛತಾ ಅಭಿಯಾನ | ವಾರ್ಡ್‌ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಸಂಜೀವಿನಿ ಒಕ್ಕೂಟದ ಸದಸ್ಯರು |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆಯುತ್ತಿರುವ ಸ್ವಚ್ಛ ಗುತ್ತಿಗಾರು ಅಭಿಯಾನವು ಕಳೆದ 11 ವಾರಗಳಿಂದ ನಿರಂತರವಾಗಿ ನಡೆಯುತ್ತಿದೆ. ಸ್ವಚ್ಛತಾ ಟಾಸ್ಕ್‌ ಫೋರ್ಸ್‌ ಹಾಗೂ ಗುತ್ತಿಗಾರು ಗ್ರಾಪಂ , ಸಂಜೀವಿನ ಒಕ್ಕೂಟ, ವರ್ತಕ ಸಂಘ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯ ಪ್ರತೀ ವಾರ ಸ್ವಚ್ಛತಾ ಜಾಗೃತಿ ಅಭಿಯಾನ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದೀಗ ಸಂಜೀವಿನಿ ತಂಡವು ವಾರ್ಡ್‌ ಮಟ್ಟದಲ್ಲಿ ಈ ಕಾರ್ಯವನ್ನು ನಡೆಸುತ್ತಿದೆ.

ಬುಧವಾರ ಸ್ವಚ್ಚತಾ ಕಾರ್ಯವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಮಟ್ಟದ ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ಕಡ್ತಲ್ ಕಜೆ- ವಳಲಂಬೆ- ಕಾಜಿಮಡ್ಕ- ವಳಲಂಬೆ ಅಂಗವಾಡಿ-ಹಾಗೂ ವಳಲಂಬೆಯ ರಸ್ತೆ ಬದಿಗಳಲ್ಲಿ ಸ್ವಚ್ಚತೆ ಮಾಡಲಾಯಿತು. ರಸ್ತೆ ಬದಿಗಳಲ್ಲಿದ್ದ ಕಸವನ್ನು ಗೋಣಿಚೀಲದಲ್ಲಿ ತುಂಬಿಸಿಡಲಾಯಿತು.ಬೆಳಗ್ಗೆ 10ಗಂಟೆಗೆ ಆರಂಭವಾದ ಸ್ವಚ್ಚತಾ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರ ಮೂಕಮಲೆ ಉಪಸ್ಥಿತಿಯಲ್ಲಿ ಮುಂದುವರೆಯಿತು.

ಈ ಸ್ವಚ್ಚತಾ ಕಾರ್ಯದಲ್ಲಿ ಶಂಖಪಾಲ ಸ್ತ್ರೀ ಶಕ್ತಿ, ಶಂಖಶ್ರೀ ಸ್ತ್ರೀ ಶಕ್ತಿ, ಶ್ರೀ ದುರ್ಗಾ ಸ್ತ್ರೀ ಶಕ್ತಿ, ಯಶಸ್ವಿ ಸಂಜೀವಿನಿ, ಬಾಂಧವ್ಯ ಸಂಜೀವಿನಿ,ಚಿಗುರು ಸಂಜೀವಿನಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ,ಆಶಾಕಾರ್ಯಕರ್ತೆ,ಅಮರ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿಗಳು, ಪಶುಸಖಿ,ಕೃಷಿ ಸಖಿ ಹಾಗೂ ವಾರ್ಡ್ ಪದಾಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

15 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

15 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

15 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago