ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

August 26, 2022
9:56 PM

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌ ಅವರಿಗೆ  ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

Advertisement
Advertisement

ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ  ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು  ಎಂದು  ಮನವಿಯಲ್ಲಿ ಆಗ್ರಹಿಸಲಾಯಿತು.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್  ಸಂಚಾಲಕರು  ಗೋಕುಲದಾಸ್, ಧರ್ಮಪ್ರೇಮಿಗಳಾದ  ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ, ಚಂದ್ರ ಮೊಗೇರ  ಉಪಸ್ಥಿತರಿದ್ದರು.

 

Advertisement

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ
May 23, 2025
4:03 PM
by: ಸಾಯಿಶೇಖರ್ ಕರಿಕಳ
ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ
May 23, 2025
3:50 PM
by: ದ ರೂರಲ್ ಮಿರರ್.ಕಾಂ
ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ
May 23, 2025
7:30 AM
by: ದ ರೂರಲ್ ಮಿರರ್.ಕಾಂ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group