ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

August 26, 2022
9:56 PM

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌ ಅವರಿಗೆ  ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ  ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು  ಎಂದು  ಮನವಿಯಲ್ಲಿ ಆಗ್ರಹಿಸಲಾಯಿತು.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್  ಸಂಚಾಲಕರು  ಗೋಕುಲದಾಸ್, ಧರ್ಮಪ್ರೇಮಿಗಳಾದ  ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ, ಚಂದ್ರ ಮೊಗೇರ  ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror