ರಾಜ್ಯ

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌ ಅವರಿಗೆ  ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

Advertisement
Advertisement

ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ  ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು  ಎಂದು  ಮನವಿಯಲ್ಲಿ ಆಗ್ರಹಿಸಲಾಯಿತು.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್  ಸಂಚಾಲಕರು  ಗೋಕುಲದಾಸ್, ಧರ್ಮಪ್ರೇಮಿಗಳಾದ  ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ, ಚಂದ್ರ ಮೊಗೇರ  ಉಪಸ್ಥಿತರಿದ್ದರು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

3 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

3 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

4 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

4 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

4 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

4 hours ago