Advertisement
ರಾಜ್ಯ

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆಯ ವ್ಯವಸ್ಥೆಯನ್ನು ಆದರ್ಶ ರೀತಿಯಲ್ಲಿ ಮಾಡಲು ಮನವಿ |

Share

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು  ಆಚರಿಸಲಾಗುತ್ತದೆ.  ಗಣೇಶನ ವಿಸರ್ಜನೆಯ ವಿಷಯ ಬಂದಾಗ,  ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್‌ ಅವರಿಗೆ  ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ  ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು  ಎಂದು  ಮನವಿಯಲ್ಲಿ ಆಗ್ರಹಿಸಲಾಯಿತು.

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್  ಸಂಚಾಲಕರು  ಗೋಕುಲದಾಸ್, ಧರ್ಮಪ್ರೇಮಿಗಳಾದ  ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ, ಚಂದ್ರ ಮೊಗೇರ  ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

20 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

20 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

20 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago