ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲಾಗುತ್ತದೆ. ಗಣೇಶನ ವಿಸರ್ಜನೆಯ ವಿಷಯ ಬಂದಾಗ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.
ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್ ಸಂಚಾಲಕರು ಗೋಕುಲದಾಸ್, ಧರ್ಮಪ್ರೇಮಿಗಳಾದ ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ, ಚಂದ್ರಶೇಖರ, ಚಂದ್ರ ಮೊಗೇರ ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…