Advertisement
ಸುದ್ದಿಗಳು

ಅಡಿಕೆ ಬೆಳೆಗಾರರ ಪರವಾಗಿ ಸರ್ಕಾರಕ್ಕೆ ಕ್ಯಾಂಪ್ಕೋ ಒತ್ತಾಯ | ಜಿಎಸ್‌ಟಿ ಇಳಿಕೆ | ಎಆರ್‌ಡಿಎಫ್‌ ಗೆ 5 ಕೋಟಿ ಅನುದಾನದ ಬೇಡಿಕೆ | ಹಳದಿ ಎಲೆರೋಗ ಪೀಡಿತ ಪ್ರದೇಶದ ಬೆಳೆಗಾರರಿಗೆ ನೆರವಿಗೆ ಮನವಿ |

Share

ಅಡಿಕೆ ಮಾರುಕಟ್ಟೆಯಲ್ಲಿ ಸಮನ್ವಯ ಸಾಧಿಸಲು ಜಿಎಸ್‌ಟಿಯನ್ನು 5 ಶೇಕಡಾದಿಂದ 2 ಶೇಕಡಾಕ್ಕೆ ಇಳಿಕೆ ಮಾಡಬೇಕು, ಅಡಿಕೆ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಗೆ 5 ಕೋಟಿ ರೂಪಾಯಿ ಅನುದಾನ ಅಗತ್ಯವಿದೆ, ಅಡಿಕೆ ಹಳದಿ ಎಲೆರೋಗ ಬಾಧಿತ ಪ್ರದೇಶದ ರೈತರ ಸಾಲಮನ್ನಾ ಹಾಗೂ ಪರ್ಯಾಯ ಬೆಳೆಗೆ ಸಹಕಾರ , ಕಾರ್ಬನ್‌ ಫೈಬರ್‌ ದೋಟಿಗೆ ಕಸ್ಟಮ್‌ ಸುಂಕ ಕಡಿಮೆ ಮಾಡುವುದು, ಎಲ್ಲಾ ತಾಮ್ರದ ಸಲ್ಫೇಟ್‌ ಮೇಲೆ ಜಿಎಸ್‌ ಟಿ ದರ ಶೇ 5 ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಅಡಿಕೆ ಬೆಳೆಗಾರರ ಪರವಾಗಿ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ನೇತೃತ್ವದಲ್ಲಿ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಎಚ್‌ ಎಂ ಕೃಷ್ಣಕುಮಾರ್‌, ನಿರ್ದೇಶಕ ಕೃಷ್ಣಪ್ರಸಾದ್‌ ಮಡ್ತಿಲ ಅವರು ಮಂಗಳವಾರ ಭೇಟಿಯಾದರು. ಈ ಸಂದರ್ಭ ಅಡಿಕೆ ಬೆಳೆಗಾರರ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಸಹಕಾರಿ ಸಂಸ್ಥೆಗಳು ಮಾತ್ರ 100 %  ಜಿ ಎಸ್‌ ಟಿ ಸರ್ಕಾರಕ್ಕೆ ಪಾವತಿಸುತ್ತಿದೆ. ಇಡೀ ಅಡಿಕೆ ಮಾರುಕಟ್ಟೆಯಲ್ಲಿ ಸಹಕಾರಿ ಸಂಘಗಳ ಪಾಲು ಶೇ.15 ರಷ್ಟು ಮಾತ್ರ ಇರುವುದರಿಂದ ಸಹಕಾರಿ ಸಂಘಗಳಿಂದ ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಡಿಕೆ ಮಾರುಕಟ್ಟೆಯಲ್ಲಿ ಸಮನ್ವಯ ಸಾಧಿಸಲು ಜಿಎಸ್‌ಟಿಯನ್ನು 5% ರಿಂದ 2% ಕ್ಕೆಇಳಿಸಲು ಮನವಿ ಮಾಡಿದರು.

ಎಆರ್‌ಡಿಎಫ್‌ ಸಂಸ್ಥೆಯು ಅಡಿಕೆ ಬೆಳೆಗಾರರ ಅನುಕೂಲಕ್ಕಾಗಿ ಯಂತ್ರಮೇಳ ಹಾಗೂ ಅಡಿಕೆ ಬಗ್ಗೆ ವೈಜ್ಜಾನಿಕವಾಗಿ ಸಂಶೋಧನೆ ನಡೆಸಿದ್ದುಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಈ ಸಂಸ್ಥೆಗೆ ಒಂದು ಕೋಟಿ ರೂಪಾಯಿ ನೀಡಿದ್ದರು. ಇದೀಗ  ಕ್ಯಾಂಪ್ಕೋ ಸಂಸ್ಥೆಗೆ ಬಾಕಿ ಇರುವ ಕೆಲಸಕ್ಕೆ ಸರ್ಕಾರದಿಂದ 5 ಕೋಟಿ  ರೂಪಾಯಿ ಮಂಜೂರು ಮಾಡಬೇಕಾಗಿ ಮನವಿ ಮಾಡಿದರು.

 ಅಡಿಕೆ ಹಳದಿ ಎಲೆರೋಗದಿಂದ ಸಂಪೂರ್ಣನಾಶವಾಗಿರುವ ,ಸುಳ್ಯ, ಕೊಪ್ಪ, ಮಡಿಕೇರಿ ಭಾಗದ ಅಡಿಕೆ ಬೆಳೆಗಾರರು ಸಹಕಾರಿ ಸಂಘಗಳಿಂದ ಪಡೆದ ಸಾಲಮನ್ನಾ ಮಾಡಿ ಹೊಸ ಕೃಷಿ ಮಾಡಲು  ಆ ಭಾಗದ ರೈತರಿಗೆ ಆರ್ಥಿಕ ಸಹಕಾರ ನೀಡಲು ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯ ಮಾಡಿದೆ.

 ಪಾನ್ ಮಸಾಲಕ್ಕೆ 28% + ಸೆಸ್ 60%‌ ತೆರಿಗೆ ಮತ್ತು 66% ಸೆಸ್ ಇದ್ದು ಹೆಚ್ಚಿನ ಪಾನ್ ಮಸಾಲ ಉತ್ಪಾದಕರು ತೆರಿಗೆ ವಂಚಿಸುತ್ತಿದ್ದು ಸಹಕಾರಿ ಸಂಸ್ಥೆಗಳು ಶೇಕಡಾ 100 ತೆರಿಗೆ ಕಟ್ಟುವುದರಿಂದ ವ್ಯವಹಾರ ಮಾಡಲು ಸಾಧ್ಯವಾಗುತ್ತಿಲ್ಲ ಮತ್ತು ದೇಶದ ಆರ್ಥಿಕ ಸಂಪನ್ಮೂಲಕ್ಕೆ ಭಾರಿ ನಷ್ಟವಾಗುವುದರಿಂದ ತೆರಿಗೆಯನ್ನು 12% ಗೆ ಇಳಿಸಬೇಕಾಗಿ ಕ್ಯಾಂಪ್ಕೋ ಅಧ್ಯಕ್ಷರು ಮನವಿ ಮಾಡಿದರು.

ಅಡಿಕೆ ಬೆಳೆಗಾರನಿಗೆ ಕಾರ್ಮಿಕರ ಕೊರತೆಯಿದ್ದು, ಹೊಸತಾಗಿ ಮಾರುಕಟ್ಟೆಗೆ ಬಂದಿರುವ ಕಾರ್ಬನ್ ಫೈಬರ್‌  ದೋಟಿಯ ಕಸ್ಟಮ್ಸ ಸುಂಕವನ್ನು ಕಡಿಮೆ ಮಾಡುವ ನಿರ್ಧಾರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳನ್ನು ಕ್ಯಾಂಪ್ಕೋ ಒತ್ತಾಯಿಸಿತು.

ಕೋಪರ್ ಸಲ್ಫೇಟ್  ಮುಖ್ಯವಾಗಿ ಪ್ಲಾಂಟೇಶನ್ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ವಿಶೇಷವಾಗಿ ಕಾಫಿ, ಅಡಿಕೆ, ರಬ್ಬರ್, ಏಲಕ್ಕಿ, ಮೆಣಸು ಮತ್ತು ಶುಂಠಿಗಳಲ್ಲಿ ಶಿಲೀಂಧ್ರ ರೋಗಗಳನ್ನು ನಿಯಂತ್ರಿಸಲು ಬಳಸಲಾಗುತ್ತದೆ. ಇದಕ್ಕೆ ಶೇ.18 ಜಿಎಸ್‌ಟಿ ನಿಗದಿಪಡಿಸಲಾಗಿದೆ. ಕೃಷಿಯಲ್ಲಿ ಬಳಸಲಾಗುವ CIB/FCO 1985 ಪರವಾನಗಿಗಳ ಅಡಿಯಲ್ಲಿ ತಯಾರಿಸಲಾದ ಎಲ್ಲಾ ತಾಮ್ರದ ಸಲ್ಫೇಟ್‌ಗಳ ಮೇಲೆ  ಜಿಎಸ್‌ ಟಿ  ದರ  5%  ನಿಗದಿಪಡಿಸುವುದು ರೈತಸಮುದಾಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಈ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎಂದು ಕ್ಯಾಂಪ್ಕೋ ಆಶಿಸುತ್ತದೆ ಹಾಗೂ ಅಡಿಕೆ ಬೆಳೆಗಾರರ ಪರವಾಗಿ ತನ್ನ ಪ್ರಯತ್ನ ಮುಂದುವರಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

3 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

3 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

11 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

16 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago