Advertisement
ಸುದ್ದಿಗಳು

ಜಾನುವಾರುಗಳ ಶೆಡ್ ನಿರ್ಮಾಣಕ್ಕೆ MGNREGA ಯೋಜನೆಯಿಂದ ರೂ 57,000 ಸಹಾಯಧನ

Share

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA ) ಯು ಜಾನುವಾರು ಶೆಡ್ ನಿರ್ಮಾಣಕ್ಕೆ ದೊರೆಯುತ್ತಿರುವ ರೂ 57,000 ಸಹಾಯಧನ ನೀಡುತ್ತಿದೆ. ಈ ದೃಷ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಪಶುಗಳ ಆರೈಕೆಗೆ ಉತ್ತಮ ಪರಿಸರ ಒದಗಿಸಲು ಸಹಕಾರಿಯಾಗುತ್ತದೆ. ಈ ಯೋಜನೆಯ ಮೊತ್ತದಲ್ಲ ರಾಜ್ಯಾಸುಸಾರ ವ್ಯತ್ಯಾಸಗಳು ಇರುತ್ತಿದ್ದು ಹೆಚ್ಚಿನ ಮಾಹಿತಿಗೆ ಪಂಚಾಯತ್ ಅಥವಾ ಜಿಲ್ಲಾ ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಮಾಹಿತಿ ಪಡೆದುಕೊಳ್ಳಬಹುದು.

ಹಸು, ಎಮ್ಮೆ, ಕುರಿ, ಹಂದಿ, ಕೋಳಿ ಮುಂತಾದ ಜಾನುವಾರುಗಳಿಗಾಗಿ ಸುರಕ್ಷಿತ ಮತ್ತು ಸ್ವಚ್ಛ ಶೆಡ್ ನಿರ್ಮಾಣಕ್ಕೆ ಯೋಜನೆಯಡಿ ಅನುದಾನ ಸಿಗುತ್ತದೆ. ಅಂದರೆ, ಕರ್ನಾಟಕದಲ್ಲಿ ಹಸು ಅಥವಾ ಎಮ್ಮೆ ಕೊಟ್ಟಿಗೆ ನಿರ್ಮಾಣಕ್ಕೆ ರೂ. 57,000 ಸಹಾಯಧನ ನೀಡುವುದು. ಇದರಲ್ಲಿ ರೂ. 10,556 ಕೂಲಿ ವೆಚ್ಚ ಹಾಗೂ ರೂ 46,644 ಸಾಮಾಗ್ರಿ ವೆಚ್ಚ ಒಳಗೊಂಡಿದ್ದು, ಈ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಹಂತಹಂತವಾಗಿ ವರ್ಗಾವಣೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

• ಜಾಬ್ ಕಾರ್ಡ್ ಪ್ರತಿಗಳು
• ಆಧಾರ್ ಕಾರ್ಡ್ ಪ್ರತಿಗಳು
• ಆಮೀನು ದಾಖಲೆಗಳು
• ಬ್ಯಾಂಕ್ ಖಾತೆ ವಿವರಗಳು
• ಪಶು ವೈದ್ಯರಿಂದ ದೃಢೀಕರಣ ಪತ್ರ
• ಸ್ಥಳೀಯವಾಗಿ ಕೇಳುವ ಇತರ ದಾಖಲೆಗಳು

ಅರ್ಜಿ ಸಲ್ಲಿಕೆ ಹೇಗೆ? :  ಅಗತ್ಯ ದಾಖಲೆಗಳೊಂದಿಗೆ ಪಂಚಾಯತ್ ಕಚೇರಿಗೆ ದಾಖಲೆಗಳನ್ನು ಸಲ್ಲಿಸಿದ ನಂತರ ಅಧಿಕಾರಿಗಳು ದಾಖಲೆಗಳನ್ನು ಪರೀಶಿಲಿಸುತ್ತಾರೆ. ತದನಂತರ ಕೆಲಸ ಆರಂಭಕ್ಕೆ ಅನುಮತಿ ದೊರೆಯುತ್ತಿದ್ದು. ಕೆಲಸ ಪೂರ್ಣಗೊಂಡಂತೆ ಹಂತ ಹಂತವಾಗಿ ಹಣ ಬಿಡುಗಡೆಯಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

3 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

11 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

11 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

13 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

20 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

21 hours ago