ಸುದ್ದಿಗಳು

ಬೀಚ್ ಪ್ರವಾಸೋದ್ಯಮದಲ್ಲಿ ಮೈಲಿಗಲ್ಲು : ಕರಾವಳಿಯ ಬೈಂದೂರಿನಲ್ಲಿ ಭಾರತದ ಪ್ರಥಮ ಮರೀನಾ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಪ್ರದೇಶದ ಪ್ರವಾಸೋದ್ಯಮಕ್ಕೆ ಒಳ್ಳೆ ಕಾಲ ಬಂದಿದೆ ಎಂದು ಅನ್ಕೋಬಹದುದ. ಸಮುದ್ರ ತೀರ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಭಾರತದ ಪ್ರಥಮ ಮರೀನಾವನ್ನು ಕರ್ನಾಟಕದ ಬೈಂದೂರಿನಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಸಿಆರ್ ಝಡ್ ಗೆ ಕೇಂದ್ರ ಸರ್ಕಾರದ ಅನುಮತಿ ಪಡೆದು ಬರುವ ದಿನಗಳಲ್ಲಿ ಕರಾವಳಿ ಪ್ರದೇಶದಲ್ಲಿ ಬೀಚ್ ಪ್ರವಾಸೋದ್ಯಮ , ಯಾತ್ರಾ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಐತಿಹಾಸಿಕ ಸ್ಥಳಗಳ ಅಭಿವೃದ್ಧಿ
ರಾಜ್ಯವನ್ನಾಳಿದ ಗಂಗರು, ಕದಂಬರು, ರಾಷ್ಟ್ರಕೂಟರು, ಚಾಲುಕ್ಯರು, ಹೊಯ್ಸರ ಕಾಲದ ಇತಿಹಾಸವನ್ನು ಪುರಾತತ್ವ ಇಲಾಖೆಯಿಂದ ಪಡೆದು, ಐತಿಹಾಸಿಕ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಿಂದ ಪ್ರವಾಸೋದ್ಯಮದ ಅಭಿವೃದ್ಧಿಯ ಜೊತೆಗೆ ಇತಿಹಾಸದ ಅರಿವು ಪಡೆಯಬಹುದಾಗಿದೆ ಎಂದರು.
ಪುರಾತನ ದೇವಾಲಯಗಳ ಕಾರಿಡಾರ್ ಯೋಜನೆ
ಬನವಾಸಿಯಲ್ಲಿರುವ ಮಧುಕೇಶ್ವರ, ಗಾಣಗಾಪುರ ದತ್ತಾತ್ರೆಯ ಹಲವಾರು ಪುರಾತನ ದೇವಾಲಯಗಳ ಕಾರಿಡಾರ್ ನಿರ್ಮಿಸಿ, ಯಾತ್ರಾ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಲಾಗುವುದು. ಬೆಣಕಲ್ ಪ್ರದೇಶದ ಅಭಿವೃದ್ದಿ ಮಾಡಲು ಸೂಚನೆ ನೀಡಲಾಗಿದೆ. ಅಂಜನಾದ್ರಿ ಬೆಟ್ಟ ಅಭಿವೃದ್ದಿ ಮಾಡಲಾಗುತ್ತಿದೆ ಎಂದರು.


ಪ್ರವಾಸಿ ಮಾರ್ಗದರ್ಶಕರಿಗೆ ಸೌಲಭ್ಯ
ನೋಂದಾಯಿತ ಪ್ರವಾಸಿ ಮಾರ್ಗದರ್ಶಕರಿಗೆ 5000 ಮಾಸಾಶನ ಕೊಡುವ ಯೋಜನೆಯನ್ನು ರೂಪಿಸಲಾಗಿದೆ. ಅವರಿಗೆ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು.

ಇತಿಹಾಸದ ಕುರುಹುಗಳನ್ನು ಹುಡುಕುವ ಕೆಲಸ ಮಾಡಲು ಸರ್ಕಾರ ಸಿದ್ಧ
ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡುವ ಉದ್ದೇಶ ಸರ್ಕಾರದ್ದು. ರಾಜ್ಯದ ಹಲವು ಹಳ್ಳಿಗಳಲ್ಲಿ ಇತಿಹಾಸದ ಕುರುಹುಗಳಿರುತ್ತವೆ, ಅವುಗಳನ್ನು ಹುಡುಕುವ ಕೆಲಸವಾಗಬೇಕಿದೆ ಎಂದರು. ನಿಸರ್ಗದ ವೈಭವವನ್ನು ಉಳಿಸುವುದು ನಮ್ಮ ಕರ್ತವ್ಯವಾಗಬೇಕಿದೆ.
ಮುಂದಿನ ಜನಾಂಗಕ್ಕೆ ಇತಿಹಾಸ ಪರಿಚಯ
ಮನುಷ್ಯ ಇತಿಹಾಸದ ಭಾಗವಾಗಬೇಕು ಇಲ್ಲವೇ ಇತಿಹಾಸ ಸೃಷ್ಟಿಸಬೇಕು. ಅನೇಕ ಅದ್ಬುತಗಳಿವೆ ಅವುಗಳನ್ನು ಹುಡುಕುವ ಕೆಲಸ‌‌ಮಾಡಬೇಕಿದೆ. ಮುಂದಿನ ಜನಾಂಗಕ್ಕೆ ನಮ್ಮ ಇತಿಹಾಸವನ್ನು ತೋರಿಸುವ ಕೆಲಸ ಮಾಡಬೇಕಿದೆ. ಸೃಷ್ಡಿ ಕರ್ತನ ಮುಂದೆ ನಾವೆಲ್ಲ ತೃಣ, ಅವನ ಸೃಷ್ಟಿಯನ್ನು ಜನರಿಗೆ ಪರಿಚಯಿಸುವ ಕೆಲಸವನ್ನು ಮಾಡಬೇಕಿದೆ. ಬೇಲೂರು ಚನ್ನಕೇಶವ ದೇವಾಲಯ ನಿರ್ಮಾಣ ನೂರು ವರ್ಷ ಮಾಡಿದ್ದಾರೆ ಎಂದರು
ಹಸಿರು ಆಯವ್ಯಯ
ಪ್ರಯಾಣ ಮಾಡುವುದು ಮನುಷ್ಯನ ಸಹಜ ಗುಣವೇ ಅಭಿವೃದ್ಧಿಗೆ ನಾಂದಿಯಾಗಿದೆ. ಕರ್ನಾಟಕ ನಿಸರ್ಗದತ್ತವಾದ ರಾಜ್ಯ. 350 ಕಿ.ಮೀ ಕರಾವಳಿ, 10 ಹವಾಮಾನ ಪ್ರದೇಶಗಳಿವೆ, 400 ಕಿ.ಮೀ. ಪಶ್ಚಿಮ ಘಟ್ಟವಿದೆ, ವೈವಿಧ್ಯಮಯ ಜೀವರಾಶಿ ಇದೆ, 300 ದಿನ ಸೂರ್ಯನ ಶಾಖ ಬೀಳುತ್ತದೆ. ನದಿಗಳು ಹರಿದಿವೆ‌. ನಿಸರ್ಗ ನಮ್ಮ ಪರವಾಗಿದೆ. ನಿಸರ್ಗವನ್ನು ಮೀರಿ ನಾವು ನಡೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಾನು ಹಸಿರು ಆಯವ್ಯಯವನ್ನು ಮಾಡಿದ್ದೇನೆ‌‌. ಈ ವರ್ಷ ಆಗಿರುವ ಪರಿಸರ ‌ನಾಶವನ್ನು ನಾವು ತುಂಬಿಕೊಳ್ಳಬೇಕು. ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

32 minutes ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

7 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

12 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

12 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

24 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

24 hours ago