ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ. ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..
ಎಪ್ರಿಲ್ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ. ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ, 3001 ರಿಂದ 400 ಚದರಡಿಗೆ 200 ರೂಪಾಯಿ ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ ವಿಧಿಸಲಾಗುತ್ತದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…