ರಾಜ್ಯದ ಜನತೆಗೆ ಇಂದಿನಿಂದ ದರ ಏರಿಕೆ ಬಿಸಿ ತಟ್ಟಲಿದೆ. ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬೆಂಗಳೂರಿನ ಜನತೆ ನಾಳೆಯಿಂದಲೇ ಕಸಕ್ಕೂ ತೆರಿಗೆ ಕಟ್ಟಬೇಕಾಗಿದೆ. ರೈತರಿಗೆ ಪ್ರೋತ್ಸಾಹ ಧನ ನೀಡಲು ನಂದಿನಿ ಹಾಲಿನ ಮೊಸರಿನ ಪ್ರತಿ ಲೀಟರ್ ದರವನ್ನು 4 ರೂಪಾಯಿಗೆ ಸರ್ಕಾರ ಹೆಚ್ಚಿಸಿರುವ ಸರ್ಕಾರ ಈ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ. ಇಂಧನ ಇಲಾಖೆ ನೌಕರರ ಪಿಂಚಣಿ ಮತ್ತು ಗ್ರಾಜ್ಯೂಟಿ ನೀಡಲು ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿದೆ. ವಿದ್ಯುತ್ ದರ 31 ಪೈಸೆ ಹೆಚ್ಚಳ ಮಾಡಿರುವುದರಿಂದ ಮಾಸಿಕ ಶುಲ್ಕ 20 ರೂಪಾಯಿಗೆ ಹೆಚ್ಚಳವಾಗಲಿದ್ದು, ಇದರಿಂದಾಗಿ 120 ರೂ. ಇದ್ದ ನಿಗದಿತ ಶುಲ್ಕ 140 ರೂಪಾಯಿಗಳಿಗೆ ಹೆಚ್ಚಳವಾಗಲಿದೆ.……..ಮುಂದೆ ಓದಿ…..
ಎಪ್ರಿಲ್ ಒಂದರಿಂದ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ಹೆಚ್ಚಿನ ಹಣ ತೆರಬೇಕಾಗಿದೆ. ಬೆಂಗಳೂರಿನಲ್ಲಿ ಕಸಕ್ಕೆ 600 ಚದರಡಿಗೆ 10 ರೂಪಾಯಿ 601 ರಿಂದ 1000 ರ ಚದರಡಿಗೆ 50 ರೂಪಾಯಿ 1001 – 2000 ಚದರಡಿಗೆ 100 ರೂಪಾಯಿ , 2001 ರಿಂದ 300 ಚದರಡಿಗೆ 150 ರೂಪಾಯಿ, 3001 ರಿಂದ 400 ಚದರಡಿಗೆ 200 ರೂಪಾಯಿ ಹಾಗೂ 4000 ಚದರಡಿ ಮೇಲ್ಪಟ್ಟ 400 ರೂಪಾಯಿ ತೆರಿಗೆ ವಿಧಿಸಲಾಗುತ್ತದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…