ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ….? | ಪ್ರೋತ್ಸಾಹಧನ 5 ರಿಂದ 7 ರೂ.ಗೆ ಹೆಚ್ಚಿಸುವ ಚಿಂತನೆ

February 10, 2026
6:40 AM
ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿನ ಪ್ರೋತ್ಸಾಹಧನವನ್ನು 5 ರೂಪಾಯಿಯಿಂದ 7 ರೂಪಾಯಿಗೆ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಹೈನುಗಾರಿಕೆಗೆ ಉತ್ತೇಜನ ನೀಡಲು 3% ಬಡ್ಡಿದರದಲ್ಲಿ ಸಾಲ ಸೌಲಭ್ಯವೂ ಘೋಷಣೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ತಾಲೂಕು ಮಟ್ಟದ ಹಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರ ತಳಿ ಕರುಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ ಕೆ ಸುರೇಶ್ ಹಾಲಿನ ಪ್ರೋತ್ಸಾಹಧನವನ್ನು 5 ರೂಪಾಯಿಯಿಂದ 7 ರೂಪಾಯಿಗೆ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಅವರು ಪ್ರಸ್ತುತ ಬಮೂಲ್(Bangalore Milk Union Limited) ಅಧ್ಯಕ್ಷರಾಗಿರುವ ಅವರು, ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಹತ್ವದ ಬದಲಾವಣೆಗಳನ್ನು ತರಲು ಒಕ್ಕೂಟ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು. ರೈತರು ಯಾವುದೇ ಕಾರಣಕ್ಕೂ ಹೈನುಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಸಲಹೆ ನೀಡಿದರು.

ಬೇಸಿಗೆ ಹಾಗೂ ಇತರ ಕಾರಣಗಳಿಂದಾಗಿ ಬಮೂಲ್ನಲ್ಲಿ ಹಾಲು ಉತ್ಪಾದನೆ 18 ಲಕ್ಷ ಲೀಟರ್‌ನಿಂದ 15 ಲಕ್ಷ ಲೀಟರ್ಗಳಿಗೆ ಇಳಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು. ಇದರಿಂದ ಹೈನುಗಾರಿಕೆಗೆ ಹೊಸ ಉತ್ತೇಜನ ನೀಡುವ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಶೇಕಡಾ 3ರ ಬಡ್ಡಿದರದಲ್ಲಿ 1 ಲಕ್ಷ 60 ಸಾವಿರ ರೂಪಾಯಿಯಿಂದ 15 ಲಕ್ಷ ರೂಪಾಯಿವರೆಗೆ ಸಾಲ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದು ಹೈನುಗಾರಿಕೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಪ್ರಮುಖ ಹೆಜ್ಜೆಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ..

7500 ಗೋಶಾಲೆಗಳು ‘ಪಶು ಆಹಾರ ಕೇಂದ್ರ’ಗಳಾಗಿ ರೂಪಾಂತರ – ಇದು ಹಸಿರು ಮೇವು ಕ್ರಾಂತಿ…!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror