Advertisement
MIRROR FOCUS

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ….? | ಪ್ರೋತ್ಸಾಹಧನ 5 ರಿಂದ 7 ರೂ.ಗೆ ಹೆಚ್ಚಿಸುವ ಚಿಂತನೆ

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ತಾಲೂಕು ಮಟ್ಟದ ಹಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರ ತಳಿ ಕರುಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ ಕೆ ಸುರೇಶ್ ಹಾಲಿನ ಪ್ರೋತ್ಸಾಹಧನವನ್ನು 5 ರೂಪಾಯಿಯಿಂದ 7 ರೂಪಾಯಿಗೆ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಅವರು ಪ್ರಸ್ತುತ ಬಮೂಲ್(Bangalore Milk Union Limited) ಅಧ್ಯಕ್ಷರಾಗಿರುವ ಅವರು, ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಹತ್ವದ ಬದಲಾವಣೆಗಳನ್ನು ತರಲು ಒಕ್ಕೂಟ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು. ರೈತರು ಯಾವುದೇ ಕಾರಣಕ್ಕೂ ಹೈನುಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಸಲಹೆ ನೀಡಿದರು.

ಬೇಸಿಗೆ ಹಾಗೂ ಇತರ ಕಾರಣಗಳಿಂದಾಗಿ ಬಮೂಲ್ನಲ್ಲಿ ಹಾಲು ಉತ್ಪಾದನೆ 18 ಲಕ್ಷ ಲೀಟರ್‌ನಿಂದ 15 ಲಕ್ಷ ಲೀಟರ್ಗಳಿಗೆ ಇಳಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು. ಇದರಿಂದ ಹೈನುಗಾರಿಕೆಗೆ ಹೊಸ ಉತ್ತೇಜನ ನೀಡುವ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಶೇಕಡಾ 3ರ ಬಡ್ಡಿದರದಲ್ಲಿ 1 ಲಕ್ಷ 60 ಸಾವಿರ ರೂಪಾಯಿಯಿಂದ 15 ಲಕ್ಷ ರೂಪಾಯಿವರೆಗೆ ಸಾಲ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದು ಹೈನುಗಾರಿಕೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಪ್ರಮುಖ ಹೆಜ್ಜೆಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

8 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

16 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

23 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago