ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ತಾಲೂಕು ಮಟ್ಟದ ಹಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರ ತಳಿ ಕರುಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ ಕೆ ಸುರೇಶ್ ಹಾಲಿನ ಪ್ರೋತ್ಸಾಹಧನವನ್ನು 5 ರೂಪಾಯಿಯಿಂದ 7 ರೂಪಾಯಿಗೆ ಹೆಚ್ಚಿಸುವ ಕುರಿತು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಅವರು ಪ್ರಸ್ತುತ ಬಮೂಲ್(Bangalore Milk Union Limited) ಅಧ್ಯಕ್ಷರಾಗಿರುವ ಅವರು, ಹೈನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಹತ್ವದ ಬದಲಾವಣೆಗಳನ್ನು ತರಲು ಒಕ್ಕೂಟ ಕಾರ್ಯೋನ್ಮುಖವಾಗಿದೆ ಎಂದು ಹೇಳಿದರು. ರೈತರು ಯಾವುದೇ ಕಾರಣಕ್ಕೂ ಹೈನುಗಾರಿಕೆಯಿಂದ ಹಿಂದೆ ಸರಿಯಬಾರದು ಎಂದು ಸಲಹೆ ನೀಡಿದರು.
ಬೇಸಿಗೆ ಹಾಗೂ ಇತರ ಕಾರಣಗಳಿಂದಾಗಿ ಬಮೂಲ್ನಲ್ಲಿ ಹಾಲು ಉತ್ಪಾದನೆ 18 ಲಕ್ಷ ಲೀಟರ್ನಿಂದ 15 ಲಕ್ಷ ಲೀಟರ್ಗಳಿಗೆ ಇಳಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದರು. ಇದರಿಂದ ಹೈನುಗಾರಿಕೆಗೆ ಹೊಸ ಉತ್ತೇಜನ ನೀಡುವ ಅಗತ್ಯ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಶೇಕಡಾ 3ರ ಬಡ್ಡಿದರದಲ್ಲಿ 1 ಲಕ್ಷ 60 ಸಾವಿರ ರೂಪಾಯಿಯಿಂದ 15 ಲಕ್ಷ ರೂಪಾಯಿವರೆಗೆ ಸಾಲ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದು ಹೈನುಗಾರಿಕೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಪ್ರಮುಖ ಹೆಜ್ಜೆಯಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ..
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…