ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು 7 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಅರವಿಂದ್ ಬೆಲ್ಲದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶು ಆಹಾರ, ಲಸಿಕೆ, ವೆಚ್ಚ ಸೇರಿದಂತೆ ಇನ್ನಿತರ ಖರ್ಚುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕಳೆದ ಏಪ್ರಿಲ್ 1ರಿಂದ 4 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದ್ದು, ಅದರ ಸಂಪೂರ್ಣ ಮೊತ್ತವನ್ನು ಹಾಲು ಉತ್ಪಾದಕರ ಖಾತೆಗಳಿಗೆ ನೇರ ನಗದು ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು. ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿದರೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ದರ ಕಡಿಮೆ ಇದೆ.
ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು 8.89 ಲಕ್ಷ ಸಕ್ರಿಯ ಸದಸ್ಯರಿದ್ದಾರೆ. ಪ್ರತಿನಿತ್ಯ 99.6 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಪ್ರತಿ ಲೀಟರ್ ಹಾಲನ್ನು 35.30 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಗ್ರಾಹಕರಿಗೆ 46 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಖರೀದಿ ಮತ್ತು ಮಾರಾಟದ ನಡುವಿನ 10.70 ವ್ಯತ್ಯಾಸದ ಹಣವನ್ನು ಹಾಲು ಸಂಗ್ರಹಣೆ, ಸಂಸ್ಕರಣೆ, ಮೂಲಸೌಲಭ್ಯ, ಸಿಬ್ಬಂದಿಗಳ ವೇತನ ಸೇರಿದಂತೆ ಇನ್ನಿತರ ಖರ್ಚುಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…