ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು 7 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಅರವಿಂದ್ ಬೆಲ್ಲದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶು ಆಹಾರ, ಲಸಿಕೆ, ವೆಚ್ಚ ಸೇರಿದಂತೆ ಇನ್ನಿತರ ಖರ್ಚುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕಳೆದ ಏಪ್ರಿಲ್ 1ರಿಂದ 4 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದ್ದು, ಅದರ ಸಂಪೂರ್ಣ ಮೊತ್ತವನ್ನು ಹಾಲು ಉತ್ಪಾದಕರ ಖಾತೆಗಳಿಗೆ ನೇರ ನಗದು ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು. ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿದರೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ದರ ಕಡಿಮೆ ಇದೆ.
ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು 8.89 ಲಕ್ಷ ಸಕ್ರಿಯ ಸದಸ್ಯರಿದ್ದಾರೆ. ಪ್ರತಿನಿತ್ಯ 99.6 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಪ್ರತಿ ಲೀಟರ್ ಹಾಲನ್ನು 35.30 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಗ್ರಾಹಕರಿಗೆ 46 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಖರೀದಿ ಮತ್ತು ಮಾರಾಟದ ನಡುವಿನ 10.70 ವ್ಯತ್ಯಾಸದ ಹಣವನ್ನು ಹಾಲು ಸಂಗ್ರಹಣೆ, ಸಂಸ್ಕರಣೆ, ಮೂಲಸೌಲಭ್ಯ, ಸಿಬ್ಬಂದಿಗಳ ವೇತನ ಸೇರಿದಂತೆ ಇನ್ನಿತರ ಖರ್ಚುಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…