ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು 7 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಅರವಿಂದ್ ಬೆಲ್ಲದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶು ಆಹಾರ, ಲಸಿಕೆ, ವೆಚ್ಚ ಸೇರಿದಂತೆ ಇನ್ನಿತರ ಖರ್ಚುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕಳೆದ ಏಪ್ರಿಲ್ 1ರಿಂದ 4 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದ್ದು, ಅದರ ಸಂಪೂರ್ಣ ಮೊತ್ತವನ್ನು ಹಾಲು ಉತ್ಪಾದಕರ ಖಾತೆಗಳಿಗೆ ನೇರ ನಗದು ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು. ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿದರೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ದರ ಕಡಿಮೆ ಇದೆ.
ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು 8.89 ಲಕ್ಷ ಸಕ್ರಿಯ ಸದಸ್ಯರಿದ್ದಾರೆ. ಪ್ರತಿನಿತ್ಯ 99.6 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಪ್ರತಿ ಲೀಟರ್ ಹಾಲನ್ನು 35.30 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಗ್ರಾಹಕರಿಗೆ 46 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಖರೀದಿ ಮತ್ತು ಮಾರಾಟದ ನಡುವಿನ 10.70 ವ್ಯತ್ಯಾಸದ ಹಣವನ್ನು ಹಾಲು ಸಂಗ್ರಹಣೆ, ಸಂಸ್ಕರಣೆ, ಮೂಲಸೌಲಭ್ಯ, ಸಿಬ್ಬಂದಿಗಳ ವೇತನ ಸೇರಿದಂತೆ ಇನ್ನಿತರ ಖರ್ಚುಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…