ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು 7 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಅರವಿಂದ್ ಬೆಲ್ಲದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶು ಆಹಾರ, ಲಸಿಕೆ, ವೆಚ್ಚ ಸೇರಿದಂತೆ ಇನ್ನಿತರ ಖರ್ಚುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕಳೆದ ಏಪ್ರಿಲ್ 1ರಿಂದ 4 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದ್ದು, ಅದರ ಸಂಪೂರ್ಣ ಮೊತ್ತವನ್ನು ಹಾಲು ಉತ್ಪಾದಕರ ಖಾತೆಗಳಿಗೆ ನೇರ ನಗದು ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು. ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿದರೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ದರ ಕಡಿಮೆ ಇದೆ.
ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು 8.89 ಲಕ್ಷ ಸಕ್ರಿಯ ಸದಸ್ಯರಿದ್ದಾರೆ. ಪ್ರತಿನಿತ್ಯ 99.6 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಪ್ರತಿ ಲೀಟರ್ ಹಾಲನ್ನು 35.30 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಗ್ರಾಹಕರಿಗೆ 46 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಖರೀದಿ ಮತ್ತು ಮಾರಾಟದ ನಡುವಿನ 10.70 ವ್ಯತ್ಯಾಸದ ಹಣವನ್ನು ಹಾಲು ಸಂಗ್ರಹಣೆ, ಸಂಸ್ಕರಣೆ, ಮೂಲಸೌಲಭ್ಯ, ಸಿಬ್ಬಂದಿಗಳ ವೇತನ ಸೇರಿದಂತೆ ಇನ್ನಿತರ ಖರ್ಚುಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…