ರೈತರಿಗೋಸ್ಕರ ಹಾಲಿನ ದರ ಪರಿಷ್ಕರಣೆ | ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ | ಡಿಸಿಎಂ ಡಿಕೆ ಶಿವಕುಮಾರ್

June 26, 2024
1:33 PM

ಹಾಲಿನ ದರ ಏರಿಕೆಯಿಂದ ರೈತರಿಗೂ ಲಾಭದ ಪಾಲು ಸಿಗಲಿದೆ, ಸಂಕಷ್ಟದಲ್ಲಿರುವ ಹೈನುಗಾರರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ದರ ಪರಿಷ್ಕರಣೆಯಲ್ಲಿ ರೈತರಿಗೂ ಪಾಲು ಇರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Advertisement
Advertisement

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಲಾಭ ರೈತರಿಗೆ ಸಿಗಲಿದೆ, ಕೆಎಂಎಫ್ ಎಂದರೆ ರೈತರು, ಕೆಎಂಎಫ್​ನಲ್ಲಿ ರೈತರೇ ಇರುವುದು ರೈತರಿಗೋಸ್ಕರನೇ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿದೆ. ಯಾರು ಎಷ್ಟೇ ವಿವಾದ ಮಾಡಲಿ. ಬೇಕಾದರೆ ರೈತರನ್ನೇ ಕೇಳಲಿ, ಅವರು ಪರಿಸ್ಥಿತಿ ಏನಿದೆ ಅಂತಾ ತಿಳಿಸುತ್ತಾರೆ. ಹಸುಗಳನ್ನು ಸಾಕಲಾಗದೆ ಇಂದು ರೈತರು ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ರೈತರಿಗೋಸ್ಕರ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಹಾಲಿನ ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ, ಈ ಹಿಂದೆ ಮೂರು ರೂ. ಈಗ ಎರಡು ರೂ.ಹೆಚ್ಚಳ ಮಾಡಿದ್ದು ಐದು ರೂ.ಗಳಲ್ಲಿ ರೈತರಿಗೆ ಪಾಲು ಸಿಗಲಿದೆ. ಇದಕ್ಕೆ ವಿರೋಧ ಮಾಡುವ ಮೂಲಕ ಬಿಜೆಪಿಯವರ ರೈತ ವಿರೋಧಿ ಧೋರಣೆ ಅನಾವರಣಗೊಂಡಿದೆ. ಬಿಜೆಪಿ ಆಳ್ವಿಕೆಯ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ನಮ್ಮ ಬಳಿ ಎಷ್ಟಿದೆ ಎನ್ನುವುದನ್ನು ನೋಡಲಿ ಮೊದಲು ಹಾಗೆ ರೈತರನ್ನ ಉಳಿಸುವ ಚಿಂತನೆ ಮಾಡಲಿ ಎಂದು ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror