ರೈತರಿಗೋಸ್ಕರ ಹಾಲಿನ ದರ ಪರಿಷ್ಕರಣೆ | ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ | ಡಿಸಿಎಂ ಡಿಕೆ ಶಿವಕುಮಾರ್

June 26, 2024
1:33 PM

ಹಾಲಿನ ದರ ಏರಿಕೆಯಿಂದ ರೈತರಿಗೂ ಲಾಭದ ಪಾಲು ಸಿಗಲಿದೆ, ಸಂಕಷ್ಟದಲ್ಲಿರುವ ಹೈನುಗಾರರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ದರ ಪರಿಷ್ಕರಣೆಯಲ್ಲಿ ರೈತರಿಗೂ ಪಾಲು ಇರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಲಾಭ ರೈತರಿಗೆ ಸಿಗಲಿದೆ, ಕೆಎಂಎಫ್ ಎಂದರೆ ರೈತರು, ಕೆಎಂಎಫ್​ನಲ್ಲಿ ರೈತರೇ ಇರುವುದು ರೈತರಿಗೋಸ್ಕರನೇ ಹಾಲಿನ ದರವನ್ನು ಹೆಚ್ಚಳ ಮಾಡಲಾಗಿದೆ. ಯಾರು ಎಷ್ಟೇ ವಿವಾದ ಮಾಡಲಿ. ಬೇಕಾದರೆ ರೈತರನ್ನೇ ಕೇಳಲಿ, ಅವರು ಪರಿಸ್ಥಿತಿ ಏನಿದೆ ಅಂತಾ ತಿಳಿಸುತ್ತಾರೆ. ಹಸುಗಳನ್ನು ಸಾಕಲಾಗದೆ ಇಂದು ರೈತರು ಮಾರಿಕೊಳ್ಳುತ್ತಿದ್ದಾರೆ. ಹಾಗಾಗಿ ರೈತರಿಗೋಸ್ಕರ ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

ಹಾಲಿನ ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ, ಈ ಹಿಂದೆ ಮೂರು ರೂ. ಈಗ ಎರಡು ರೂ.ಹೆಚ್ಚಳ ಮಾಡಿದ್ದು ಐದು ರೂ.ಗಳಲ್ಲಿ ರೈತರಿಗೆ ಪಾಲು ಸಿಗಲಿದೆ. ಇದಕ್ಕೆ ವಿರೋಧ ಮಾಡುವ ಮೂಲಕ ಬಿಜೆಪಿಯವರ ರೈತ ವಿರೋಧಿ ಧೋರಣೆ ಅನಾವರಣಗೊಂಡಿದೆ. ಬಿಜೆಪಿ ಆಳ್ವಿಕೆಯ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ನಮ್ಮ ಬಳಿ ಎಷ್ಟಿದೆ ಎನ್ನುವುದನ್ನು ನೋಡಲಿ ಮೊದಲು ಹಾಗೆ ರೈತರನ್ನ ಉಳಿಸುವ ಚಿಂತನೆ ಮಾಡಲಿ ಎಂದು ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror