#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

August 1, 2023
11:02 AM
ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು.

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror