ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

Advertisement
Advertisement

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

15 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

16 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

17 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

18 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago