Advertisement
ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

Advertisement
Advertisement

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

19 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

19 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

19 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

19 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago