ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

Advertisement
Advertisement

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

52 minutes ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

10 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

10 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

11 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

11 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

11 hours ago