Advertisement
ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

37 minutes ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

13 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

14 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

14 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

21 hours ago