Advertisement
ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

5 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

1 day ago