Advertisement
ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

Advertisement
Advertisement

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

Advertisement

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

44 mins ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

1 hour ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

2 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

2 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

4 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

6 hours ago