Advertisement
ಸುದ್ದಿಗಳು

#NandiniMilk | ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ | ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರ ಕರ್ನಾಟಕದಲ್ಲೇ ಕಡಿಮೆಯಂತೆ…! |

Share

ಗ್ರಾಹಕರ ಜೇಬಿಗೆ ಇಂದಿನಿಂದ ಮತ್ತೆ ಕತ್ತರಿ ಬೀಳಲಿದೆ. ಇಂದಿನಿಂದ ಕರ್ನಾಟಕದಲ್ಲಿ ಪ್ರತಿ ಲೀಟರ್​ ನಂದಿನಿ ಹಾಲಿನ #NandiniMilk ದರ 3 ರೂಪಾಯಿ ಹೆಚ್ಚಳವಾಗಿದೆ. ಜುಲೈ 21 ರಂದು ನಡೆದ ಸಭೆಯಲ್ಲಿ ಹಾಲಿನ ದರ ಹೆಚ್ಚಳಕ್ಕೆ ನಿರ್ಧಾರ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಗಸ್ಟ್​ 1 ರಿಂದ ಅಧಿಕೃತವಾಗಿ ಜಾರಿಗೆ ಬರುವಂತೆ ಸೂಚಿಸಿದ್ದರು. ಅದರಂತೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ #KMF, ಇಂದಿನಿಂದ ಪ್ರತಿ ಲೀಟರ್​ ನಂದಿನಿ ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಿದೆ.

ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಕಡಿಮೆ ಇದೆ ಎಂದು ಕೆಎಂಎಫ್ ಎಂಡಿ ಜಗದೀಶ್ ತಿಳಿಸಿದ್ದಾರೆ. 39 ರೂಪಾಯಿ ಇದ್ದ ನಂದಿನಿ ಹಾಲಿನ ದರ ಈಗ 42 ರೂ. ಆಗಿದೆ. ಆಂಧ್ರ ಪ್ರದೇಶದಲ್ಲಿ ಲೀಟರ್ ಹಾಲಿಗೆ 56 ರೂ., ಕೇರಳದಲ್ಲಿ 51 ರೂ. ಇದೆ. ಮಹಾರಾಷ್ಟ್ರದಲ್ಲಿ 54 ರೂ., ತಮಿಳುನಾಡಿನಲ್ಲಿ ಹಾಲಿಗೆ 44 ರೂ. ಇದೆ ಎಂದು ಮಾಹಿತಿ ನೀಡಿದರು. ದರ ಕಡಿಮೆ ಹಿನ್ನೆಲೆಯಲ್ಲಿ ರೈತರು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಇದರಿಂದ ರೈತರ ಆದಾಯವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರು ಸಹಕರಿಸಬೇಕು ಎಂದು ಕೆಎಂಎಫ್ ಎಂಡಿ ಜಗದೀಶ್ ಮನವಿ ಮಾಡಿದರು.

ಯಾವ್ಯಾವ ಪಾಕೇಟ್​ ಹಾಲು ಎಷ್ಟಿದೆ?: ಟೋನ್ಡ್​​ ಹಾಲು ನೀಲಿ ಪಾಕೆಟ್‌ನ ದರ ಪ್ರತಿ ಲೀಟರ್​ ಹಿಂದೆ 39 ರೂಪಾಯಿ ಇತ್ತು. ಪರಿಷ್ಕೃತ ದರ 42 ರೂಪಾಯಿಗೆ ಹೆಚ್ಚಳವಾಗಿದೆ. ಹಾಗೇ ಹೋಮೋಜಿನೈಸ್ಡ್ ಹಸುವಿನ ಹಾಲು ಹಿಂದೆ ಪ್ರತಿ ಲೀಟರ್‌ಗೆ 40 ರೂಪಾಯಿ ಇತ್ತು.. ಇದು ಇಂದಿನಿಂದ 43 ರೂಪಾಯಿ ಆಗಲಿದೆ. ಅದೇ ರೀತಿ ಶುಭಂ ಅಂದ್ರೆ ಕೇಸರಿ ಪಾಕೆಟ್ ಅಥವಾ ಸ್ಪೆಷಲ್ ಹಾಲಿನ ದರ ಹಿಂದೆ ಪ್ರತಿ ಲೀಟರ್‌ಗೆ 45 ರೂಪಾಯಿ ಇದ್ದು, ಪರಿಷ್ಕೃತ ದರ 48 ರೂಪಾಯಿಗೆ ಹೆಚ್ಚಳವಾಗಿದೆ. ಇನ್ನು ಮೊಸರು ಪ್ರತಿ ಲೀಟರ್‌ಗೆ ಹಿಂದೆ 47 ರೂಪಾಯಿ ಇತ್ತು. ಇಂದಿನಿಂದ ಪ್ರತಿ ಲೀಟರ್‌ ಮೊಸರಿನ ಬೆಲೆ 50 ರೂಪಾಯಿಗೆ ಹೆಚ್ಚಳವಾಗಿದೆ. ಉಳಿದಂತೆ 200 ಮಿಲಿ ಪಾಕೆಟ್‌ನ ನಂದಿನಿ ಮಜ್ಜಿಗೆ ಬೆಲೆ ಹಿಂದೆ 7 ರೂಪಾಯಿ ಇತ್ತು.. ಪರಿಷ್ಕೃತ ದರ 9 ರೂಪಾಯಿಗೆ ಹೆಚ್ಚಳವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

5 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

21 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago