Advertisement
MIRROR FOCUS

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ

Share

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸೋಗಾಲ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರತಿನಿತ್ಯ 7500 ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದಿಸುವ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸರಿಯಾದ ಸಮಯಕ್ಕೆ ರೈತರಿಗೆ ಹಾಲಿನ ಹಣ ಪಾವತಿಯಾಗುತ್ತಿದ್ದು, ಹಸುಗಳ ಹಾರೈಕೆಗೂ ಒತ್ತು ನೀಡಲಾಗುತ್ತಿದೆ. ಬಹುತೇಕ ರೈತರು ಸೀಮೆ ಹಸುಗಳಿಂದಲೇ ಹಾಲು ಉತ್ಪಾದಿಸುತ್ತಿದ್ದು, ಅವುಗಳಿಗೆ ಪಶು ವೈದ್ಯರಿಂದ ಸೂಕ್ತ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾದರಿ ಸಂಘವಾಗಿ ಮಾರ್ಪಟ್ಟಿದೆ.  ಚನ್ನಪಟ್ಟಣ ವ್ಯಾಪ್ತಿಯಲ್ಲಿ 173 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 3 ಸಾವಿರ ಟನ್ ಪಶು ಆಹಾರವನ್ನು ಒದಗಿಸಲಾಗುತ್ತಿದೆ.   ನಿರಂತರವಾಗಿ ಪಶುಗಳ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ.  ತಾಲ್ಲೂಕಿನ ಹೆಚ್ಚಿನ ಜನರು ಹೈನುಗಾರಿಕೆ ಅವಲಂಬಿಸಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲಿನ ಉತ್ಪಾದನೆಯಾಗುತ್ತಿದೆ. ರೈತರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಶಿಬಿರದ ಉಪ ವ್ಯವಸ್ಥಾಪಕ ಡಾ.ಸಿ.ಆರ್. ಕಿರಣ್ ಹಾಗೂ  ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಲಿಂಗೇಶ್ ಕುಮಾರ್ ಹೇಳುತ್ತಾರೆ.

ಪ್ರತಿದಿನ 7 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಸಂಘ ಉತ್ತಮ ಆದಾಯ ಗಳಿಸುತ್ತಿದೆ , ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲ ರೀತಿಯ ಸವಲತ್ತು ನೀಡಲಾಗುತ್ತಿದ್ದು, ರೈತರಿಂದ ಉತ್ತಮ ಪ್ರೋತ್ಸಾಹ ಹಾಗೂ ಸಹಕಾರ ದೊರೆಯುತ್ತಿದೆ ಎಂದು  ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೊಡ್ಡ ಬಸೇಗೌಡ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

10 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

11 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago