Advertisement
MIRROR FOCUS

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ

Share

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸೋಗಾಲ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರತಿನಿತ್ಯ 7500 ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದಿಸುವ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸರಿಯಾದ ಸಮಯಕ್ಕೆ ರೈತರಿಗೆ ಹಾಲಿನ ಹಣ ಪಾವತಿಯಾಗುತ್ತಿದ್ದು, ಹಸುಗಳ ಹಾರೈಕೆಗೂ ಒತ್ತು ನೀಡಲಾಗುತ್ತಿದೆ. ಬಹುತೇಕ ರೈತರು ಸೀಮೆ ಹಸುಗಳಿಂದಲೇ ಹಾಲು ಉತ್ಪಾದಿಸುತ್ತಿದ್ದು, ಅವುಗಳಿಗೆ ಪಶು ವೈದ್ಯರಿಂದ ಸೂಕ್ತ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾದರಿ ಸಂಘವಾಗಿ ಮಾರ್ಪಟ್ಟಿದೆ.  ಚನ್ನಪಟ್ಟಣ ವ್ಯಾಪ್ತಿಯಲ್ಲಿ 173 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 3 ಸಾವಿರ ಟನ್ ಪಶು ಆಹಾರವನ್ನು ಒದಗಿಸಲಾಗುತ್ತಿದೆ.   ನಿರಂತರವಾಗಿ ಪಶುಗಳ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ.  ತಾಲ್ಲೂಕಿನ ಹೆಚ್ಚಿನ ಜನರು ಹೈನುಗಾರಿಕೆ ಅವಲಂಬಿಸಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲಿನ ಉತ್ಪಾದನೆಯಾಗುತ್ತಿದೆ. ರೈತರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಶಿಬಿರದ ಉಪ ವ್ಯವಸ್ಥಾಪಕ ಡಾ.ಸಿ.ಆರ್. ಕಿರಣ್ ಹಾಗೂ  ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಲಿಂಗೇಶ್ ಕುಮಾರ್ ಹೇಳುತ್ತಾರೆ.

ಪ್ರತಿದಿನ 7 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಸಂಘ ಉತ್ತಮ ಆದಾಯ ಗಳಿಸುತ್ತಿದೆ , ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲ ರೀತಿಯ ಸವಲತ್ತು ನೀಡಲಾಗುತ್ತಿದ್ದು, ರೈತರಿಂದ ಉತ್ತಮ ಪ್ರೋತ್ಸಾಹ ಹಾಗೂ ಸಹಕಾರ ದೊರೆಯುತ್ತಿದೆ ಎಂದು  ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೊಡ್ಡ ಬಸೇಗೌಡ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

35 minutes ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

50 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

15 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago