ಸಿರಿಧಾನ್ಯ ಮೇಳ | ಮೂರು ದಿನದಲ್ಲಿ185.41 ಕೋಟಿ ರೂಪಾಯಿ ವಹಿವಾಟು |

January 28, 2025
7:40 AM
ಬೆಂಗಳೂರಿನಲ್ಲಿ ನಡೆದ ಮೂರು ದಿನಗಳ ಸಿರಿಧಾನ್ಯ ಮೇಳದಲ್ಲಿ 185.41 ಕೋಟಿ ರೂಪಾಯಿ ವಹಿವಾಟು ನಡೆದಿದೆ. ಈ ಮೂಲಕ ಸಿರಿಧಾನ್ಯ ಕೃಷಿಗೂ ಅವಕಾಶ ಹಾಗೂ ಪ್ರೋತ್ಸಾಹ ಲಭ್ಯವಾಗಿದೆ. ರೈತರ ಶ್ರಮ ಹಾಗೂ ಕೃಷಿಯ ಸಾಧ್ಯತೆಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನಕ್ಕೆ ಬಲ ಬಂದಿದೆ.

ಬೆಂಗಳೂರಿನಲ್ಲಿ ಈಚೆಗೆ ಮೂರು ದಿನಗಳ ಅಂತರಾಷ್ಟ್ರೀಯ ಮಟ್ಟದ ಸಾವಯವ ಹಾಗೂ ಸಿರಿಧಾನ್ಯ ವ್ಯಾಪಾರ ಮೇಳ ಮುಕ್ತಾಯಗೊಂಡಿತು. 185.41 ಕೋಟಿ ರೂಪಾಯಿ ಆದಾಯ ಗಳಿಸಿ ಅಂದಾಜು 3 ಲಕ್ಷ ಜನರುಮೇಳದಲ್ಲಿ ಭಾಗವಹಿಸಿದರು. ಮೇಳದಲ್ಲಿ 25 ರಾಜ್ಯಗಳು ಮತ್ತು ಐದು ರಾಜ್ಯಗಳ ಕೃಷಿ ಸಚಿವರು ಭಾಗವಹಿಸಿದ್ದರು. ಮೇಳದಲ್ಲಿ 330ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು, 194 ಉತ್ಪಾದಕರು ಮತ್ತು 105 ಮಾರುಕಟ್ಟೆ ಸಂಸ್ಥೆಗಳು ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಕೃಷಿ ಕ್ಷೇತ್ರದ ಬಲವರ್ಧನೆಗೆ ಸರ್ಕಾರ ಶ್ರಮಿಸಲಿದೆ. ರೈತರು ಸುದೃಢವಾದಾಗ ದೇಶವು ಸುಭದ್ರವಾಗುತ್ತದೆ ಮತ್ತು ಹಳ್ಳಿಗಳು ಅಭಿವೃದ್ಧಿ ಹೊಂದುತ್ತವೆ ಎಂದರು. ರಾಜ್ಯ ಸರ್ಕಾರವು ಎಲ್ಲಾ ರೀತಿಯ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಹೇಳಿದರು. ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಮತ್ತು ದೈನಂದಿನ ಆಹಾರದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror