ಬೆಂಗಳೂರಿನಲ್ಲಿ ಈಚೆಗೆ ಮೂರು ದಿನಗಳ ಅಂತರಾಷ್ಟ್ರೀಯ ಮಟ್ಟದ ಸಾವಯವ ಹಾಗೂ ಸಿರಿಧಾನ್ಯ ವ್ಯಾಪಾರ ಮೇಳ ಮುಕ್ತಾಯಗೊಂಡಿತು. 185.41 ಕೋಟಿ ರೂಪಾಯಿ ಆದಾಯ ಗಳಿಸಿ ಅಂದಾಜು 3 ಲಕ್ಷ ಜನರುಮೇಳದಲ್ಲಿ ಭಾಗವಹಿಸಿದರು. ಮೇಳದಲ್ಲಿ 25 ರಾಜ್ಯಗಳು ಮತ್ತು ಐದು ರಾಜ್ಯಗಳ ಕೃಷಿ ಸಚಿವರು ಭಾಗವಹಿಸಿದ್ದರು. ಮೇಳದಲ್ಲಿ 330ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು, 194 ಉತ್ಪಾದಕರು ಮತ್ತು 105 ಮಾರುಕಟ್ಟೆ ಸಂಸ್ಥೆಗಳು ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಕೃಷಿ ಕ್ಷೇತ್ರದ ಬಲವರ್ಧನೆಗೆ ಸರ್ಕಾರ ಶ್ರಮಿಸಲಿದೆ. ರೈತರು ಸುದೃಢವಾದಾಗ ದೇಶವು ಸುಭದ್ರವಾಗುತ್ತದೆ ಮತ್ತು ಹಳ್ಳಿಗಳು ಅಭಿವೃದ್ಧಿ ಹೊಂದುತ್ತವೆ ಎಂದರು. ರಾಜ್ಯ ಸರ್ಕಾರವು ಎಲ್ಲಾ ರೀತಿಯ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಹೇಳಿದರು. ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಮತ್ತು ದೈನಂದಿನ ಆಹಾರದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…