ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

January 5, 2025
11:54 AM
ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ.

ಚಿತ್ರದುರ್ಗ ತಾಲ್ಲೂಕು ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯಗಳ ಬೆಳೆಗೆ ಪ್ರಸಿದ್ಧವಾಗುತ್ತಿದೆ. ಅದರಲ್ಲೂ ಹೊಸದುರ್ಗ ತಾಲ್ಲೂಕಿನ ರೈತರು ಸಿರಿಧಾನ್ಯಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.…..ಮುಂದೆ ಓದಿ….

ಆಧುನಿಕ ವೇಗದ ಬದುಕು ಹಾಗೂ ಕೃಷಿಯಲ್ಲಿ ರಾಸಾಯನಿಕಗಳ ಅತಿಯಾದ ಬಳಕೆಯಿಂದ ಮಧುಮೇಹ, ರಕ್ತದ ಒತ್ತಡ ಇತ್ಯಾದಿ ಹಲವು ಆರೋಗ್ಯ  ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಇವುಗಳ ನಿವಾರಣೆಗೆ ಸಿರಿಧಾನ್ಯ ರಾಮಬಾಣವಾಗಿ ಪರಿಣಮಿಸಿದೆ. ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ. ರೈತಸಿರಿ ಯೋಜನೆ ಅಡಿ ಪ್ರತಿ ಹೆಕ್ಟೇರ್ ಸಿರಿಧಾನ್ಯ ಬೆಳೆಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ ಎನ್ನುತ್ತಾರೆ ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ.

ತಾಲ್ಲೂಕಿನಲ್ಲಿ ಸಾಮೆ, ನವಣೆ, ಕೊರಲೆ, ರಾಗಿ ಇತ್ಯಾದಿ ಹತ್ತು ಹಲವು ವಿಧದ ಸಿರಿಧಾನ್ಯಗಳ ಬೆಳೆಯುವ ಪ್ರದೇಶ ಆರು ವರ್ಷಗಳಲ್ಲಿ ಮೂರು ಪಟ್ಟು ವಿಸ್ತರಿಸಿದೆ. ಇದಕ್ಕೆ ಪೂರಕವಾಗಿ ಪುರಸಭೆಯೂ ಹೊಸದುರ್ಗವನ್ನು ಸಿರಿಧಾನ್ಯಗಳ ನಾಡು ಎಂದು ಘೋಷಿಸಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.  ರಾಜ್ಯದಲ್ಲೇ ಅತಿ ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯುವ ನಾಡು ಎಂದು ತಾಲ್ಲೂಕು ಗುರುತಿಸಿಕೊಂಡಿರುವುದು ಸಂತಸ ಮೂಡಿಸಿದೆ ಎಂದು ಹೇಳುತ್ತಾರೆ ಹೊಸದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೋರೇಶ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror