ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

January 5, 2025
11:54 AM
ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ.

ಚಿತ್ರದುರ್ಗ ತಾಲ್ಲೂಕು ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯಗಳ ಬೆಳೆಗೆ ಪ್ರಸಿದ್ಧವಾಗುತ್ತಿದೆ. ಅದರಲ್ಲೂ ಹೊಸದುರ್ಗ ತಾಲ್ಲೂಕಿನ ರೈತರು ಸಿರಿಧಾನ್ಯಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.…..ಮುಂದೆ ಓದಿ….

Advertisement

ಆಧುನಿಕ ವೇಗದ ಬದುಕು ಹಾಗೂ ಕೃಷಿಯಲ್ಲಿ ರಾಸಾಯನಿಕಗಳ ಅತಿಯಾದ ಬಳಕೆಯಿಂದ ಮಧುಮೇಹ, ರಕ್ತದ ಒತ್ತಡ ಇತ್ಯಾದಿ ಹಲವು ಆರೋಗ್ಯ  ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಇವುಗಳ ನಿವಾರಣೆಗೆ ಸಿರಿಧಾನ್ಯ ರಾಮಬಾಣವಾಗಿ ಪರಿಣಮಿಸಿದೆ. ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ. ರೈತಸಿರಿ ಯೋಜನೆ ಅಡಿ ಪ್ರತಿ ಹೆಕ್ಟೇರ್ ಸಿರಿಧಾನ್ಯ ಬೆಳೆಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ ಎನ್ನುತ್ತಾರೆ ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ.

ತಾಲ್ಲೂಕಿನಲ್ಲಿ ಸಾಮೆ, ನವಣೆ, ಕೊರಲೆ, ರಾಗಿ ಇತ್ಯಾದಿ ಹತ್ತು ಹಲವು ವಿಧದ ಸಿರಿಧಾನ್ಯಗಳ ಬೆಳೆಯುವ ಪ್ರದೇಶ ಆರು ವರ್ಷಗಳಲ್ಲಿ ಮೂರು ಪಟ್ಟು ವಿಸ್ತರಿಸಿದೆ. ಇದಕ್ಕೆ ಪೂರಕವಾಗಿ ಪುರಸಭೆಯೂ ಹೊಸದುರ್ಗವನ್ನು ಸಿರಿಧಾನ್ಯಗಳ ನಾಡು ಎಂದು ಘೋಷಿಸಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.  ರಾಜ್ಯದಲ್ಲೇ ಅತಿ ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯುವ ನಾಡು ಎಂದು ತಾಲ್ಲೂಕು ಗುರುತಿಸಿಕೊಂಡಿರುವುದು ಸಂತಸ ಮೂಡಿಸಿದೆ ಎಂದು ಹೇಳುತ್ತಾರೆ ಹೊಸದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೋರೇಶ್.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror