ಹೊಸದುರ್ಗ ತಾಲೂಕಿನಲ್ಲಿ ಸಿರಿಧಾನ್ಯ ಬೆಳೆ ಪ್ರದೇಶ ಪ್ರತಿವರ್ಷ ವಿಸ್ತರಣೆ

January 5, 2025
11:54 AM
ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ.

ಚಿತ್ರದುರ್ಗ ತಾಲ್ಲೂಕು ಇತ್ತೀಚಿನ ವರ್ಷಗಳಲ್ಲಿ ಸಿರಿಧಾನ್ಯಗಳ ಬೆಳೆಗೆ ಪ್ರಸಿದ್ಧವಾಗುತ್ತಿದೆ. ಅದರಲ್ಲೂ ಹೊಸದುರ್ಗ ತಾಲ್ಲೂಕಿನ ರೈತರು ಸಿರಿಧಾನ್ಯಗಳ ಕಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.…..ಮುಂದೆ ಓದಿ….

ಆಧುನಿಕ ವೇಗದ ಬದುಕು ಹಾಗೂ ಕೃಷಿಯಲ್ಲಿ ರಾಸಾಯನಿಕಗಳ ಅತಿಯಾದ ಬಳಕೆಯಿಂದ ಮಧುಮೇಹ, ರಕ್ತದ ಒತ್ತಡ ಇತ್ಯಾದಿ ಹಲವು ಆರೋಗ್ಯ  ಸಮಸ್ಯೆಗಳು ಸೃಷ್ಟಿಯಾಗುತ್ತಿದ್ದು, ಇವುಗಳ ನಿವಾರಣೆಗೆ ಸಿರಿಧಾನ್ಯ ರಾಮಬಾಣವಾಗಿ ಪರಿಣಮಿಸಿದೆ. ಮಳೆ ಕಡಿಮೆ ಬೀಳುವ ಪ್ರದೇಶವಾದ ಹೊಸದುರ್ಗ ತಾಲ್ಲೂಕಿನ ಹವಾಮಾನವೂ ಇದಕ್ಕೆ ಪೂರಕವಾಗಿದ್ದು, ಸರ್ಕಾರ ಹೆಕ್ಟೇರ್ಗೆ ಹತ್ತು ಸಾವಿರದಂತೆ ನೀಡುತ್ತಿರುವ ಸಹಾಯಧನ ಸಿರಿಧಾನ್ಯ ಬೆಳೆಯಲು ರೈತರಿಗೆ ಪ್ರೋತ್ಸಾಹ ನೀಡುತ್ತಿದೆ. ರೈತಸಿರಿ ಯೋಜನೆ ಅಡಿ ಪ್ರತಿ ಹೆಕ್ಟೇರ್ ಸಿರಿಧಾನ್ಯ ಬೆಳೆಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ ಎನ್ನುತ್ತಾರೆ ತಾಲ್ಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ.

ತಾಲ್ಲೂಕಿನಲ್ಲಿ ಸಾಮೆ, ನವಣೆ, ಕೊರಲೆ, ರಾಗಿ ಇತ್ಯಾದಿ ಹತ್ತು ಹಲವು ವಿಧದ ಸಿರಿಧಾನ್ಯಗಳ ಬೆಳೆಯುವ ಪ್ರದೇಶ ಆರು ವರ್ಷಗಳಲ್ಲಿ ಮೂರು ಪಟ್ಟು ವಿಸ್ತರಿಸಿದೆ. ಇದಕ್ಕೆ ಪೂರಕವಾಗಿ ಪುರಸಭೆಯೂ ಹೊಸದುರ್ಗವನ್ನು ಸಿರಿಧಾನ್ಯಗಳ ನಾಡು ಎಂದು ಘೋಷಿಸಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.  ರಾಜ್ಯದಲ್ಲೇ ಅತಿ ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯುವ ನಾಡು ಎಂದು ತಾಲ್ಲೂಕು ಗುರುತಿಸಿಕೊಂಡಿರುವುದು ಸಂತಸ ಮೂಡಿಸಿದೆ ಎಂದು ಹೇಳುತ್ತಾರೆ ಹೊಸದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಬೋರೇಶ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror