ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.
ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.
ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.
ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…