ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.
ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.
ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.
ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…